Advertisement

Train ಮಂಗಳೂರು-ಗೋವಾ ಹೊಸ ವಂದೇ ಭಾರತ್‌ ರೈಲು: ನಳಿನ್‌ ಕುಮಾರ್‌

12:11 AM Sep 23, 2023 | Team Udayavani |

ಮಂಗಳೂರು: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ಅವರನ್ನು ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಶುಕ್ರವಾರ ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

Advertisement

ಅಕ್ಟೋಬರ್‌ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ.

ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್‌ವರೆಗೆ ವಿಸ್ತರಿಸುವಂತೆ ಇರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಸಚಿವರನ್ನು ಒತ್ತಾಯಿಸಲಾಗಿದ್ದು ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲ ಎಂದವರು ಹೇಳಿದರು.

ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಪ್ಯಾಸೆಂಜರ್‌ ರೈಲು ಒದಗಿಸಲು ಒಪ್ಪಿಗೆ ನೀಡಿದ್ದಾರೆ.

ಮುರ್ಡೇಶ್ವರ ರೈಲು ಒಂದು ಗಂಟೆ ಬೇಗ
ಕುಂದಾಪುರ: ವಿಸ್ತರಿತ ಬೆಂಗಳೂರು – ಮೈಸೂರು – ಮಂಗಳೂರು – ಮುರ್ಡೇಶ್ವರ ರೈಲಿನ ವೇಳಾಪಟ್ಟಿ ವಿಳಂಬವನ್ನು ಪ್ರಯಾಣಿಕರ ಒತ್ತಾಸೆ ಯಂತೆ ಸರಿಪಡಿಸಲು ರೈಲ್ವೇ ಇಲಾಖೆ ಮುಂದಾಗಿದ್ದು, ಈಗ ಒಂದು ಗಂಟೆ ಬೇಗ ತಲುಪುವಂತೆ ವೇಳಾಪಟ್ಟಿ ಸಿದ್ಧಪಡಿಸುವಂತೆ ಕೇಂದ್ರ ರೈಲ್ವೇ ಸಚಿವರು ಸೂಚನೆ ನೀಡಿದ್ದಾರೆ.

Advertisement

ಈ ಸಂಬಂಧ ಕುಂದಾಪುರದ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಸಲ್ಲಿಸಿದ ಮನವಿಯನ್ನು ಶುಕ್ರವಾರ ಕೊಡಗು – ಮೈಸೂರು ಸಂಸದ ಪ್ರತಾಪ್‌ಸಿಂಹ ದಿಲ್ಲಿಯಲ್ಲಿ ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ಅವರಿಗೆ ಸಲ್ಲಿಸಿ ವೇಳಾಪಟ್ಟಿ ಪರಿಷ್ಕೃರಿಸುವಂತೆ ವಿನಂತಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next