Advertisement

Mangalore: ದೂರು ನೀಡಲು ಬಂದ ಮಹಿಳೆಗೆ ಕಿರುಕುಳ: ಪೊಲೀಸ್‌ ಅಮಾನತು

11:52 PM Feb 08, 2024 | Team Udayavani |

ಮಂಗಳೂರು: ಪ್ರಕರಣವೊಂದರ ಬಗ್ಗೆ ದೂರು ನೀಡಲು ಬಂದ ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಸಂತೋಷ್‌ನನ್ನು ಅಮಾನತುಗೊಳಿಸಿ ಪೊಲೀಸ್‌ ಕಮಿಷನರ್‌ ಆದೇಶಿಸಿದ್ದಾರೆ.

Advertisement

ದೂರು ನೀಡಲು ಪೊಲೀಸ್‌ ಠಾಣೆಗೆ ತೆರಳಿದ್ದ ವೇಳೆ ನಂಬರ್‌ಪಡೆದ ಸಂತೋಷ್‌ ಆಕೆಗೆ ಆಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ್ದ. ದೂರು ನೀಡಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಮಹಿಳೆ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಅವರಿಗೆ ದೂರು ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next