Advertisement

ಮಂಗಳೂರು: ಗುಡ್ಡ ಕುಸಿದು ಮನೆಗಳಿಗೆ ಹಾನಿ; 5 ಮನೆಯವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

01:10 PM Jul 07, 2022 | Team Udayavani |

ಮಂಗಳೂರು: ಕಣ್ಣೂರು ಗ್ರಾಮದ  ಬಳ್ಳೂರು ಗುಡ್ಡೆ ಎಂಬಲ್ಲಿ ಗುರುವಾರ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Advertisement

ಲತೀಶ್  ಅದ್ರಮ್ ಹಾಗೂ ಮತ್ತಿತರರ ಮನೆಗಳಿಗೆ ಹಾನಿಯುಂಟಾಗಿದ್ದು,  ಪಡೀಲ್ ನ ಕಣ್ಣೂರು ಗ್ರಾಮದ ಬಳ್ಳೂರು ಗುಡ್ಡೆಯಲ್ಲಿ ಅಪಾಯದ ಅಂಚಿನಲ್ಲಿರುವ 5 ಮನೆಯವರನ್ನು ಈಗಾಗಲೇ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಉಡುಪಿ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಜಿಲ್ಲೆಯ ಹಲವೆಡೆ ಮಳೆ ಅವಾಂತ

Advertisement

ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬಂಟ್ವಾಳ ತಾಲೂಕಿನ ಪಂಜಿಕಲ್ಲು ಎಂಬಲ್ಲಿ ಶೆಡ್‌ ಮೇಲೆ ಗುಡ್ಡ ಕುಸಿದು ಬಿದ್ದು, ಮೂವರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಹಲವು ಗ್ರಾಮಗಳಲ್ಲಿ ಕೃತಕ ನೆರೆಯುಂಟಾಗಿದ್ದು, ಕುಕ್ಕೇ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಕಳೆದ ನಾಲ್ಕು ದಿನಗಳಿಂದ ಸ್ನಾನಘಟ್ಟ ಮುಳುಗಡೆಯಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next