Advertisement

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವುದಾಗಿ ನೂರಾರು ಮಂದಿಗೆ ವಂಚನೆ

05:00 PM Aug 19, 2022 | Team Udayavani |

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 138ಕ್ಕೂ ಅಧಿಕ ಮಂದಿಯನ್ನು ನಂಬಿಸಿ ಕೋಟ್ಯಂತರ ರೂ. ಪಂಗನಾಮ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ  ಮಂಗಳೂರಿನಲ್ಲಿ ನಡೆದಿದೆ.

Advertisement

ರಾಮ್‌ ಪ್ರಸಾದ್‌ (37) ಬಂಧಿತ ಆರೋಪಿ.

ರಾಮ್‌ ಪ್ರಸಾದ್‌ ತಾನು ಕೆಎಂಎಫ್‌ ಉದ್ಯೋಗಿ ಎಂದು ತಿರುಗಾಡುತ್ತಿದ್ದ. ನಿರುದ್ಯೋಗಿಗಳಿಗೆ ಮಂಗಳೂರಿನ  ಕೆಎಂಎಫ್‌ನ ವಿವಿಧ ವಿಭಾಗಗಳಲ್ಲಿ   ಕೆಲಸಕೊಡಿಸುವುದಾಗಿ ನಂಬಿಸಿ ಹಂತ ಹಂತವಾಗಿ ಹಣ ವಸೂಲಿ ಮಾಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮುಂಬೈ: ಬೊರಿವಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ರಕ್ಷಣಾ ಕಾರ್ಯಾಚರಣೆ

ಕೆಲಸಕೊಡಿಸುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ 1.84 ಕೋಟಿಗಿಂತಲೂ ಅಧಿಕ ಹಣವನ್ನು ಪಡೆದುಕೊಂಡು, ನಕಲಿ ಕೆಎಂಎಫ್ ಐಡಿ ಕಾರ್ಡ್‌, ನೇಮಕಾತಿ ಪತ್ರ ನೀಡಿ ಮೋಸ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next