Advertisement

ಬಾಲಕಿ ಅತ್ಯಾಚಾರ,ಕೊಲೆ: ಕೃತ್ಯವನ್ನು ಕಟುವಾಗಿ ಖಂಡಿಸಿದ ಶಾಸಕ ಡಾ.ಭರತ್ ಶೆಟ್ಟಿ ವೈ

05:18 PM Nov 24, 2021 | Team Udayavani |

ಮಂಗಳೂರು: ನಗರದ ಉಳಾಯಿಬೆಟ್ಟು ಸಮೀಪದ ಪರಾರಿಯಲ್ಲಿ ನಡೆದ 8 ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಭೀಕರ ಹತ್ಯೆಯ ಘಟನೆಯನ್ನು ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿ ವೈ ಕಟುವಾಗಿ ಖಂಡಿಸಿದ್ದಾರೆ.

Advertisement

ಈ ಕುರಿತು ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು,ಈ ಕೃತ್ಯವನ್ನು ಎಸಗಿರುವ ಆರೋಪಿತರಿಗೆ  ಕಠಿಣ ಶಿಕ್ಷೆ ಆಗುವ ಮೂಲಕ ಇತರರಿಗೆ ಪಾಠವಾಗಬೇಕಿದೆ. ಅನ್ಯ ರಾಜ್ಯದ ಕಾರ್ಮಿಕರ ಕುರಿತಾಗಿ ಸಮಗ್ರ ಮಾಹಿತಿಯನ್ನು ಅವರನ್ನು ಕರೆದುಕೊಂಡು ಬರುವ ಗುತ್ತಿಗೆದಾರರು ಪಡೆದು ಅದನ್ನು ಪೊಲೀಸ್ ಇಲಾಖೆಯಲ್ಲಿ ದಾಖಲೀಕರಣ ಮಾಡಿ ನಿಗಾ ವಹಿಸುವ ಕೆಲಸ ಅಗಬೇಕಿದೆ. ಈ ನಿಟ್ಟಿನಲ್ಲಿ ಗೃಹ ಸಚಿವರಲ್ಲಿ ಮನವಿ ಮಾಡಲಾಗುದು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಂಗಳೂರು: ಲೈಂಗಿಕ ದೌರ್ಜನ್ಯವೆಸಗಿ  8 ರ ಬಾಲಕಿ ಕೊಲೆ; 4 ಆರೋಪಿಗಳ ಬಂಧನ

ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿಯ ರಾಜ್ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next