Advertisement

ಕಂಬಳ ಓಟಗಾರ ಶ್ರೀನಿವಾಸ ಗೌಡರಿಗೆ ಮುಖ್ಯಮಂತ್ರಿಯಿಂದ ಸನ್ಮಾನ

10:04 AM Feb 18, 2020 | Naveen |

ಮಂಗಳೂರು: ಕಂಬಳ ಓಟದಲ್ಲಿ ದಾಖಲೆ ನಿರ್ಮಿಸಿದ ಮಂಗಳೂರು ತಾಲೂಕು ಅಶ್ವತ್ಥ ಪುರದ ಶ್ರೀನಿವಾಸ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರದಂದು ಸನ್ಮಾನಿಸಿದರು.

Advertisement

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಲ್ಪನಾ ಮೊದಲಾದವರು ಉಪಸ್ಥಿತರಿದ್ದರು. ಕಾರ್ಮಿಕ ಇಲಾಖೆಯ ವತಿಯಿಂದ ಶ್ರೀನಿವಾಸ ಗೌಡ ಅವರಿಗೆ ರೂ. 3 ಲಕ್ಷ ಮೊತ್ತದ ಚೆಕ್ ನೀಡಲಾಯಿತು.

ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು ತಮ್ಮ ಕಚೇರಿಯಲ್ಲಿ ಕಂಬಳ ಓಟಗಾರ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು, ಶ್ರೀನಿವಾಸ ಅವರಿಗೆ ರೂ. 1 ಲಕ್ಷ ನೆರವು ನೀಡುವುದಾಗಿ ಪ್ರಕಟಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next