Advertisement

ಮಂಗಳೂರು: ಕೂಲಿ ಕಾರ್ಮಿಕ ನೀರಿಗೆ ಬಿದ್ದು ಸಾವು

12:26 AM Nov 30, 2022 | Team Udayavani |

ಮಂಗಳೂರು: ಕೂಲಿ ಕಾರ್ಮಿಕನೋರ್ವ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಗರದ ದಕ್ಷಿಣ ದಕ್ಕೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

Advertisement

ಮೃತಪಟ್ಟವರನ್ನು ದಕ್ಕೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸುಮಾರು 30ರಿಂದ 35 ವರ್ಷ ವಯಸ್ಸಿನ ಸಂತೋಷ ಎಂದು ಗುರುತಿಸಲಾಗಿದೆ.

ರಾತ್ರಿ 7.30ರ ವೇಳೆಗೆ ನದಿಯಲ್ಲಿ ತೇಲುತ್ತಿದ್ದ ಸಂತೋಷ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಆಸ್ಪತ್ರೆ ತಲುಪುವ ಮೊದಲೇ ಮೃತಪಟ್ಟಿದ್ದರು. ಮೃತರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಎಣ್ಣೆಕಪ್ಪು ಮೈಬಣ್ಣ, 5.4 ಅಡಿ ಎತ್ತರ, ಸಾಧಾರಣ ಶರೀರ, ಕೋಲುಮುಖ ಹೊಂದಿದ್ದು ಕಪ್ಪು, ಕೆಂಪು, ನೀಲಿ, ಬಿಳಿ ಪಟ್ಟಿಗಳಿರುವ ಅರ್ಧ ತೋಳಿನ ಟೀಶರ್ಟ್‌, ಕಪ್ಪು ಬಣ್ಣದ ಪ್ಯಾಂಟ್‌ ಧರಿಸಿದ್ದರು. ಬಲಗೈಯಲ್ಲಿ ಕಪ್ಪು ಮಚ್ಚೆ ಇದೆ. ವಾರಸುದಾರರು ಇದ್ದರೆ ದಕ್ಷಿಣ ಪೊಲೀಸ್‌ ಠಾಣೆ (0824-2220518)ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next