Advertisement

ಮಂಗಳೂರು : ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಎಂ.ಬಿ ಪಾಟೀಲ್

03:28 PM Jul 21, 2021 | Team Udayavani |

ಮಂಗಳೂರು : ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲ ಮಾಜಿ ಸಚಿವ ಎಂ.ಬಿ.ಪಾಟೀಲ್ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದಾರೆ.

Advertisement

ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರಿಗೆ ಮೆದುಳಿಗೆ ಏಟು ಬಿದ್ದು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಆಸ್ಕರ್ ಭೇಟಿ ಬಳಿಕ ಮಾತನಾಡಿದ ಎಂ ಬಿ ಪಾಟೀಲ್, ಅವರಿಗೆ ಸದ್ಯ ಪರಿಣಿತ ತಜ್ಞ ವೈದ್ಯರ ತಂಡ ಚಿಕಿತ್ಸೆ ಕೊಡ್ತಿದೆ. ಮಣಿಪಾಲ್ ವೈದ್ಯರು ಸೇರಿದಂತೆ ಬೇರೆ ಬೇರೆ ತಜ್ಞ ವೈದ್ಯರು ಚಿಕಿತ್ಸೆ ಕೊಡ್ತಿದ್ದಾರೆ. ಸೋನಿಯಾ ಗಾಂಧಿ, ರಾಹುಲ್, ಪ್ರಿಯಾಂಕ ಆಸ್ಕರ್ ಕುಟುಂಬದ ಜೊತೆ ಮಾತನಾಡಿದ್ದಾರೆ. ಪೇಜಾವರ ಸ್ವಾಮೀಜಿಗಳು ಕೂಡ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದರು.

ಆಸ್ಕರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ನನ್ನ ತಂದೆ ಉಪಾಧ್ಯಕ್ಷರಾಗಿದ್ರು. ನಮ್ಮ ತಂದೆಯವರ ಸ್ವಭಾವ ಮತ್ತು ಆಸ್ಕರ್ ಅವರ ಸ್ವಭಾವ ಒಂದೇ ಆಗಿತ್ತು. ಹೀಗಾಗಿ ನನ್ನ ಮೇಲೂ ವಿಶೇಷ ಪ್ರೀತಿ ಇದ್ದ ಕಾರಣ ಈ ಸ್ಥಾನಕ್ಕೇರಲು ಸಹಾಯ ಮಾಡಿದ್ದರು. ಅವರ ಆರೋಗ್ಯದ ವಿಚಾರದಲ್ಲಿ ಪ್ರಾರ್ಥಿಸ್ತೇವೆ, ಅವರು ಜಂಟಲ್ ಮೆನ್, ಬಹಳ ಒಳ್ಳೆಯ ಮನುಷ್ಯ. ಟೆಲಿ ಮೆಡಿಸಿನ್ ಸಂಬಂಧವೂ ಎಲ್ಲಾ ವೈದ್ಯರ ಜೊತೆ ಮಾತುಕತೆ ‌ನಡೀತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next