Advertisement

ಮಂಗಳೂರು: ಮಿಥುನ್ ರೈ ಕಾರು ಗುರಿಯಾಗಿಸಿ ಕಲ್ಲು ತೂರಾಟ

09:01 PM May 10, 2023 | Team Udayavani |

ಮಂಗಳೂರು: ಮೂಡುಶೆಡ್ಡೆಯಲ್ಲಿ ಚುಣಾವಣೋತ್ತರ ಘರ್ಷಣೆ ಬುಧವಾರ ಸಂಜೆ ನಡೆದಿದೆ. ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಕಾರು ಹಾದು ಹೋಗುವಾಗ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೂ ಘೋಷಣೆ ಹಾಕಿದ್ದಾರೆ.

Advertisement

ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next