Advertisement

ಮಂಗಳೂರು: ಟಿಪ್ಪರ್ ಪಲ್ಟಿಯಾಗಿ ಒರ್ವ ಸಾವು, ಮೂವರಿಗೆ ಗಾಯ

06:48 PM Nov 22, 2019 | Naveen |

ಮಂಗಳೂರು: ಗೊಬ್ಬರ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ನೀರುಮಾರ್ಗ ಸಮೀಪದ ಪಡು ಚಿಲ್ಪಾಡಿ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ.

Advertisement

ಘಟನೆಯಲ್ಲಿ ಮೃತಪಟ್ಟವರನ್ನು ಲೋಕನಾಥ್ ಕುಟ್ಟಿಕಳ (35) ಎಂದು ಗುರುತಿಸಲಾಗಿದೆ. ಗೊಬ್ಬರ ಸಾಗಿಸುತ್ತಿದ್ದ ಟಿಪ್ಪರ್ ಚಿಲ್ಪಾಡಿ ಬಳಿ ಪಲ್ಟಿ ಹೊಡೆದಿದ್ದು, ಈ ಸಂದರ್ಭದಲ್ಲಿ ಲೋಕನಾಥ್ ಟಿಪ್ಪರ್ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದರು ದಾರಿ ಮದ್ಯೆ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next