Advertisement

ಮಂಗಳೂರು: PFI ಪ್ರತಿಭಟನೆಯ ವೇಳೆ ಲಾಠಿ ಚಾರ್ಜ್‌; ಹಲವರಿಗೆ ಗಾಯ

11:30 AM Apr 04, 2017 | Team Udayavani |

ಮಂಗಳೂರು: ಇಲ್ಲಿನ ಪೊಲೀಸ್‌ ಆಯುಕ್ತರ ಕಚೇರಿಗೆ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆಯ  ಕಾರ್ಯಕರ್ತರು ಮಂಗಳವಾರ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಲಾಠಿ ಚಾರ್ಜ್‌ ನಡೆದ ಘಟನೆ ನಡೆದಿದೆ.

Advertisement

ಹಿಂದೂ ಪರ ಸಂಘಟನೆಯ ನಾಯಕರ ಹತ್ಯೆಗೆ ಸಂಬಂಧಿಸಿ ಸಂಘಟನೆಯ ಕಾರ್ಯಕರ್ತನನ್ನು ಬಂಧಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆದಿದ್ದು, ಈ ವೇಳೆ ಬಸ್‌ಗಳ ಮೇಲೂ ಕಲ್ಲು ತೂರಾಟ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. 

ನೂರಾರು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಹಿಗ್ಗಾಮುಗ್ಗಾ ಲಾಠಿ ಬೀಸಿದ್ದಾರೆ.

ಲಾಠಿ ಏಟಿನಿಂದ ಹಲವರು ಗಾಯಗೊಂಡಿದ್ದು , ಓರ್ವ ಪಿಎಫ್ಐ ಕಾರ್ಯಕರ್ತನ ತಲೆಗೆ ಗಂಭೀರ ಗಾಯವಾಗಿ ತೀವ್ರ ಸ್ವರೂಪದಲ್ಲಿ ರಕ್ತಸ್ರಾವವಾಗಿದೆ. ಗಾಯಾಳುಗಳಿಗೆ  ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

Advertisement

7 ಮಂದಿ ಪೊಲೀಸ್‌ ಸಿಬಂದಿಯೂ ಗಾಯಗೊಂಡಿರುವುದಾಗಿ ಆಯುಕ್ತ ಚಂದ್ರಶೇಖರ್‌ ಅವರು ತಿಳಿಸಿದ್ದಾರೆ. 

ಮುತ್ತಿಗೆ ಹಾಕಲು ಯತ್ನಿಸಿದ 60 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.  ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next