Advertisement
ಏಜೆಂಟ್ಗಳ ಮೂಲಕ ಶ್ರೀಲಂಕಾದಿಂದ ತ.ನಾಡಿಗೆ ಬಂದು ಅಲ್ಲಿಂದ ಬೆಂಗಳೂರಿಗೆ, ಬಳಿಕ ಮಂಗಳೂರಿಗೆ ಬಂದಿರುವ ಇವರು ಕೆನಡಕ್ಕೆ ಹೋಗುವ ಯೋಜನೆ ಹಾಕಿದ್ದರು. ಶ್ರೀಲಂಕಾದ ಏಜೆಂಟ್ ಇವರಿಗೆ ಕೆನಡದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಪ್ರತಿಯೊಬ್ಬರಿಂದ 10 ಲಕ್ಷ ರೂ.ವರೆಗೆ ಹಣ ಪಡೆದಿರುವ ಮಾಹಿತಿ ಲಭಿಸಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ತಿಳಿಸಿದ್ದಾರೆ.
ಇದು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಗಂಭೀರ ಪ್ರಕರಣವಾಗಿದ್ದು, ಮಾನವ ಕಳ್ಳ ಸಾಗಾಟವೂ ಹೌದು. ವಶವಾಗಿರುವವರಲ್ಲಿ ಹೆಚ್ಚಿನವರು ಉತ್ತರ ಶ್ರೀಲಂಕಾ ಭಾಗದವರು ಎಂಬ ಮಾಹಿತಿ ಲಭಿಸಿದೆ. ಇವರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ 103/2021 ಕಲಂ 120 (ಬಿ), 370, 420 ಐಪಿಸಿ, ವಿದೇಶೀ ಕಾಯಿದೆ 1964ರ ಸೆಕ್ಷನ್ 14 ಮತ್ತು ಪಾಸ್ಪೋರ್ಟ್ ಕಾಯಿದೆ 1967ರ ಸೆಕ್ಷನ್ 12(1)(ಎ)ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.