Advertisement

ಮಂಗಳೂರು: ಸಿಎಫ್‌ಐ ಕಾರ್ಯಕರ್ತರಿಂದ ರಸ್ತೆ ತಡೆ, ಪೊಲೀಸರಿಂದ ಲಾಠಿ ಚಾರ್ಜ್

09:53 AM Dec 17, 2019 | Naveen |

ಮಂಗಳೂರು: ದೆಹಲಿಯಲ್ಲಿ ಜಾಮಿಮಾ ಮಿಲ್ಲಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಮಂಗಳೂರಿನ ಬಲ್ಮಠದಲ್ಲಿರುವ ಕಲೆಕ್ಟರ್ ಗೇಟ್ ಬಳಿ ರಸ್ತೆ ತಡೆ ನಡೆಸಿದರು.

Advertisement

ಈ ವೇಳೆ ಪೊಲೀಸರು ಪ್ರತಿಭಟನಾ ನಿರತ ಸಿಎಫ್‌ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿ ವಶಕ್ಕೆ ತೆಗೆದುಕೊಂಡರು.

ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳ ಮೇಲೆ ನಡೆಸಿದ ಕೃತ್ಯ ಖಂಡಿಸಿ ಪ್ರತಿಭಟನೆ ನಡೆಸಲು ಸಿಎಫ್‌ಐ ಕಾರ್ಯಕರ್ತರಿಗೆ ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ರಸ್ತೆ ನಡೆಸಲು ನಿರ್ಧರಿಸಿದರು. ಅದರಂತೆ ಖಾಸಗಿ ಬಸ್ಸೊಂದರಲ್ಲಿ ಆಗಮಿಸಿದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಯಿತು. ಅಷ್ಟರಲ್ಲಿ ಪೊಲೀಸರು ಸಿಎಫ್‌ಐ ಕಾರ್ಯಕರ್ತರ ಮೇಲೆ ಲಾಠಿ ಜಾರ್ಜ್ ನಡೆಸಿದರಲ್ಲದೆ, ಪ್ರತಿಭಟನಾಕಾರರನ್ನು ಪೊಲೀಸ್ ಸ್ಥಳದಿಂದ ತರವುಗೊಳಿಸಿ ಬಸ್ಸಿಗೆ ತುಂಬಿಸಿ ಕರೆದೊಯ್ದುರು.

Advertisement
Advertisement

Udayavani is now on Telegram. Click here to join our channel and stay updated with the latest news.

Next