Advertisement
ಮೀನುಗಾರಿಕಾ ಬಂದರಿನ ಸಮಗ್ರ ಅಭಿವೃದ್ಧಿಯಲ್ಲಿ ಕೈಗೊಳ್ಳುವ ಯೋಜನೆಗಳ ಕುರಿತಂತೆ ಇತ್ತೀಚೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮೀನುಗಾರರ ಮುಖಂಡರ ಜತೆ ನಡೆದ ಸಮಾಲೋಚನ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ಈ ತೀರ್ಮಾನಕ್ಕೆ ಬರಲಾಗಿದೆ.
ಮೀನುಗಾರಿಕಾ ಬೋಟ್ಗಳ ದಟ್ಟಣೆಯಿಂದಾಗಿ 2010ರಲ್ಲಿ 3ನೇ ಹಂತದ ವಿಸ್ತರಣೆಗೆ ಚಾಲನೆ ನೀಡಲಾಗಿತ್ತು. ಯೋಜನೆಯಂತೆ 2015ಕ್ಕೆ ಪೂರ್ಣಗೊಂಡು ಉಪಯೋಗಕ್ಕೆ ಬಿಟ್ಟುಕೊಡಬೇಕಾಗಿತ್ತು. ಆರಂಭದಲ್ಲಿ ಯೋಜನಾ ವೆಚ್ಚ 57 ಕೋ.ರೂ. ಇತ್ತು. ಆದರೆ ಅನುಷ್ಠಾನ ಹಂತದಲ್ಲಿದ್ದಾಗ ಹಸಿರುಪೀಠದಲ್ಲಿ ದಾವೆ ದಾಖಲಾಗಿ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ವಾದ-ವಿವಾದಗಳ ಬಳಿಕ ನ್ಯಾಯಾಲಯ ಕಾಮಗಾರಿ ಮುಂದುವರಿಸಲು ಹಸಿರು ನಿಶಾನೆ ತೋರಿಸಿತ್ತು. ಆದರೆ ಯೋಜನಾ ವೆಚ್ಚದಲ್ಲಿ ಆಗಿರುವ ಏರಿಕೆ ಮತ್ತು ಕಾಮಗಾರಿಯಲ್ಲಿ ಕೆಲವು ಬದಲಾವಣೆ ಮಾಡಿ ಯೋಜನೆಯನ್ನು 80 ಕೋ.ರೂ. ವೆಚ್ಚಕ್ಕೆ ಪರಿಷ್ಕರಿಸಲಾಗಿತ್ತು.
Related Articles
Advertisement
ಪ್ರಸ್ತುತ ತೃತೀಯ ಹಂತದ ಜೆಟ್ಟಿ ಕಾಮಗಾರಿ ಅಪೂರ್ಣವಾಗಿದ್ದರೂ ದೋಣಿಗಳ ಕಾರ್ಯಾಚರಣೆ ಆರಂಭವಾಗಿದೆ. ಮೀನಿನ ಎಣ್ಣೆ ಹಾಗೂ ಗೊಬ್ಬರಕ್ಕೆ ಹೋಗುವ ಮೀನುಗಳನ್ನು ಅಲ್ಲಿ ಇಳಿಸಲಾಗುತ್ತಿದೆ. ದ್ವಿತೀಯ ಹಂತದ ಜೆಟ್ಟಿಯಿಂದ ತೃತೀಯ ಹಂತದ ಜೆಟ್ಟಿಗೆ ಹೋಗಲು ಸೇತುವೆ ನಿರ್ಮಾಣವಾಗಿದೆ. ಆದರೆ ಇದಕ್ಕೆ ಸಂಪರ್ಕ ರಸ್ತೆ ನಿರ್ಮಾಣವಾಗಿಲ್ಲ. ಸದ್ಯಕ್ಕೆ ಹೊಗೆ ಬಜಾರ್ನಲ್ಲಿ ಇರುವ ಸಂರ್ಪಕ ರಸ್ತೆಯನ್ನು ತೃತೀಯ ಹಂತದ ಜೆಟ್ಟಿಗೆ ಸಂಪರ್ಕ ರಸ್ತೆಯಾಗಿ ಬಳಸಲಾಗುತ್ತಿದೆ. ಮೀನುಗಾರರೇ ತಾತ್ಕಾಲಿಕವಾಗಿ ಈ ರಸ್ತೆಯನ್ನು ಬಳಕೆಗೆ ಸಿದ್ಧಗೊಳಿಸಿದ್ದಾರೆ. ಇದೇ ರೀತಿ ಬೆಂಗರೆ ಬದಿಯಲ್ಲಿರುವ ಮೀನುಗಾರಿಕಾ ಜೆಟ್ಟಿಯಲ್ಲಿ ದೋಣಿಗಳು ತಂಗುತ್ತಿವೆ.
ತುರ್ತು ಕಾಮಗಾರಿಗಳುತೃತೀಯ ಹಂತದ ಮೀನುಗಾರಿಕಾ ಜೆಟ್ಟಿಯ ಪೂರ್ಣಪ್ರಮಾಣದಲ್ಲಿ ಬಳಕೆಗೆ ಯೋಜನೆಯಲ್ಲಿ ಒಳಗೊಂಡಿರುವ ಕೆಲವು ಕಾಮಗಾರಿಗಳು ತುರ್ತಾಗಿ ನಡೆಯಬೇಕಿದೆ. ರಸ್ತೆ, ನೀರು, ವಿದ್ಯುತ್ ಸಂಪರ್ಕ, ಆವರಣಗೋಡೆ, ಮೈನಸ್ 3 ಮೀಟರ್ ಡ್ರೆಜ್ಜಿಂಗ್, ಶೌಚಾಲಯ ಸೌಲಭ್ಯಗಳು ಮುಖ್ಯವಾದವುಗಳು. ಜತೆಗೆ ಮೀನುಗಾರರ ವಿಶ್ರಾಂತಿಕೊಠಡಿ, ಬಲೆ ದುರಸ್ತಿ ಶೆಡ್ ನಿರ್ಮಾಣವೂ ಮೂಲ ಯೋಜನೆಯಲ್ಲಿ ಒಳಗೊಂಡಿದೆ. ಇದಕ್ಕೆ ಇನ್ನೂ ಸುಮಾರು 25 ಕೋ.ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಹೀಗಾಗಿ ಬಾಕಿಯಿರುವ ಈ ಹಣವನ್ನು ಸ್ಮಾರ್ಟ್ಸಿಟಿ ಅನುದಾನದಡಿ ವಿನಿಯೋಗಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಸ್ಮಾರ್ಟ್ಸಿಟಿ ಯೋಜನೆಯಲ್ಲಿ ಮಂಗಳೂರಿನ ಮೀನುಗಾರಿಕಾ ಬಂದರಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ. ಇದರಲ್ಲಿ ಮೂರನೇ ಹಂತವನ್ನು ಸೇರಿಸಿ ಅಭಿವೃದ್ಧಿಗೊಳಿಸಲಾಗುವುದು.
-ಶಶಿಕಾಂತ ಸೆಂಥಿಲ್, ದ.ಕ. ಜಿಲ್ಲಾಧಿಕಾರಿ – ಕೇಶವ ಕುಂದರ್