Advertisement

ಡಿ.9ರ ನಂತರ ಕಾಂಗ್ರೆಸ್ ನವರು ಬುಗರಿ ಆಡಿಸಿದರೆ, ನಾವು ಚಕ್ರ ತಿರುಗಿಸುತ್ತೇವೆ:ಸಂಸದ ನಳಿನ್

03:15 PM Nov 30, 2019 | Team Udayavani |

ಮಂಗಳೂರು: ಮುಂದಿನ ಮೂರುವರೇ ವರ್ಷವೂ ಬಿಜೆಪಿ ಸರ್ಕಾರ ಭದ್ರವಾಗಿರುತ್ತದೆ. ಉಪಚುನಾವಣೆಯಲ್ಲಿ 15 ಸ್ಥಾನಗಳನ್ನು ಗೆಲ್ಲುತ್ತೇವೆ. ಡಿಸೆಂಬರ್ 9ರ ನಂತರ ಕಾಂಗ್ರೆಸ್ ನವರು ಬುಗರಿ ಆಡಿಸುತ್ತಾರೆ ನಾವು ಚಕ್ರ ತಿರುಗಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

Advertisement

ಅವರು ಮಂಗಳೂರಿನಲ್ಲಿ ಶನಿವಾರದಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಾತನಾಡುತ್ತಾ, ಮುಂದಿನ ಉಪಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಭದ್ರವಾಗಲಿದೆ. ಇನ್ನುಳಿದ ಮೂರುವರೆ ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯನವರು ಮುಂದಿನ ಮುಖ್ಯಮಂತ್ರಿ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಕಳೆದ ಬಾರಿ ಚುನಾವಣೆ ನಡೆದಾಗ ನಾನೇ ಸಿಎಂ ಎಂದರು. ಕುಮಾರಸ್ವಾಮಿ ಬಳಿಕ ಮತ್ತೆ ಅದನ್ನೇ ಹೇಳುತ್ತಿದ್ದಾರೆ. ಆದರೆ ಅವರ ಗ್ರಹಚಾರ ಸರಿಯಿಲ್ಲ ಎಂದು ವ್ಯಂಗ್ಯವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next