Advertisement

Mangalore: ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

11:21 PM Jan 22, 2024 | Team Udayavani |

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಗೆ ಸಲಹೆ ನೀಡುವುದಾಗಿ ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ ಪ್ರಕರಣ ನಡೆದಿದೆ.

Advertisement

ದೂರುದಾರರು ಫೇಸ್‌ಬುಕ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಬಗ್ಗೆ ಸಲಹೆ ಒದಗಿಸುವ ವಾಟ್ಸ್‌ಆ್ಯಪ್‌ ಗ್ರೂಪ್‌ನ ಜಾಹೀರಾತು ನೋಡಿ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡುವ ಬಗ್ಗೆ ಸಲಹೆ ಪಡೆದುಕೊಳ್ಳಲು ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಸೇರಿಕೊಂಡು ಹೂಡಿಕೆಗೆ ಸಂಬಂಧಿಸಿದಂತೆ ಬರುವ ಸಂದೇಶಗಳನ್ನು ನೋಡುತ್ತಿದ್ದರು. ಗ್ರೂಪ್‌ನ ಅಡ್ಮಿನ್‌ ತಿಳಿಸಿದಂತೆ ಟ್ರೇಡಿಂಗ್‌ ಬಗ್ಗೆ ಆನ್‌ಲೈನ್‌ ಆ್ಯಪ್‌ನಲ್ಲಿ ನೊಂದಣಿ ಮಾಡಿಕೊಂಡಿದ್ದರು. ಅಡ್ಮಿನ್‌ ಆ್ಯಪ್‌ ಮೂಲಕ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದು, ಅದರಂತೆ ಆತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 10,32,000 ರೂ. ವರ್ಗಾಯಿಸಿದ್ದಾರೆ. ಆದರೆ ಅವರ ಹಣವನ್ನು ಹೂಡಿಕೆ ಮಾಡದೆ ವಂಚಿಸಲಾಗಿದೆ ಎಂದು ದೂರು ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next