Advertisement

ಪಂಪ್ ವೆಲ್ ಸುಸಜ್ಜಿತ ಬಸ್ ನಿಲ್ದಾಣ ಪ್ರಸ್ತಾವನೆಗೆ ಅನುಮೋದನೆ: ಸಚಿವ ಭೈರತಿ ಬಸವರಾಜು

03:35 PM Feb 29, 2020 | Naveen |

ಮಂಗಳೂರು: ಪಂಪ್ ವೆಲ್ ನಲ್ಲಿ 445 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಸಂಬಂಧಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದ್ದು, ಸಚಿವ ಸಂಪುಟದಲ್ಲಿ ಮಂಡನೆಗೆ ಕಳುಹಿಸಿಕೊಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ತಿಳಿಸಿದ್ದಾರೆ.

Advertisement

ಲಾಲ್ ಬಾಗ್ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕುದ್ರೋಳಿಯಲ್ಲಿರುವ ಪ್ರಾಣಿ ವಧಾ ಕೇಂದ್ರದಿಂದ ನದಿ ನೀರಿಗೆ ಹಾನಿಯಾಗುತ್ತದೆ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಇದಕ್ಕೆ ಪೂರಕ ಸ್ಥಳ ಗುರುತು ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಸೂಕ್ತ ಸ್ಥಳ ಅಂತಿಮಗೊಳಿಸಿ ಶೀಘ್ರ ಬೇರೆಡೆ ವ್ಯವಸ್ಥೆ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next