Advertisement
ಸಿಐಡಿ ತಂಡ ಪ್ರಥಮವಾಗಿ ಡಿ. 19ರಂದು ಮಂಗಳೂರಿನಲ್ಲಿ ನಡೆದ ಘಟನೆಯ ಬಗ್ಗೆ ವಾಸ್ತವ ಚಿತ್ರಣದ ಮಾಹಿತಿಯನ್ನು ಕಲೆ ಹಾಕಿ ಬಳಿಕ ತನಿಖೆಯನ್ನು ಕೈಗೆತ್ತಿಕೊಳ್ಳಲಿದ್ದು, ಈ ನಿಟ್ಟಿನಲ್ಲಿ ಈಗ ಘಟನಾವಳಿಯ ಮಾಹಿತಿ ಕಲೆಹಾಕುವ ಕಾರ್ಯದಲ್ಲಿ ನಿರತವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Related Articles
ಗೋಲಿಬಾರ್ ಬಳಿಕ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್ ಅಧಿ ಕಾರಿಗಳು ಹಾಗೂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬಂದಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಅಧಿಕಾರಿಗಳು, ಸೈಬರ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕರೆಗಳ ಮೂಲವನ್ನು ಪತ್ತೆಹಚ್ಚುವಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
Advertisement
ಭದ್ರತೆ ಹೆಚ್ಚಳಕ್ಕೆ ಕ್ರಮಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಿಂದ ಇರುವಂತೆ ಉನ್ನತ ಅಧಿಕಾರಿಗಳು ಸೂಚನೆ ನೀಡಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸುವ ಪ್ರತಿಯೊಬ್ಬರನ್ನೂ ಕೂಲಂಕಷ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕಮಿಷನರ್ಗೆ ಹೊರಗೆ ಸಂಚಾರ ವೇಳೆಯಲ್ಲೂ ಭದ್ರತೆ ಒದಗಿಸುವಂತೆ ಉನ್ನತಾಧಿ ಕಾರಿಗಳು ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಹಳೆಯ ಅಧಿಕಾರಿಗಳಿಗೆ ಬುಲಾವ್
ಮಂಗಳೂರಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕರೆಸಿ ಅವರಿಂದ ಇಲ್ಲಿನ ಪರಿಸರದ ಸೂಕ್ಷ್ಮಗಳನ್ನು ಹಾಗೂ ವಸ್ತುಸ್ಥಿತಿ ತಿಳಿದು ಕೊಳ್ಳಲು ಹಾಗೂ ಅದರಿಂದ ಈ ಘಟನೆಯ ತನಿಖೆಗೆ ಏನಾದರೂ ಸಹಾಯ ಆಗ ಬಹುದೇ ಎನ್ನುವುದನ್ನು ಪರಿಶೀಲಿಸುತ್ತಿದ್ದಾರೆ. ಈ ದಿಶೆಯಲ್ಲಿ ಕೆ.ಯು. ಬೆಳ್ಳಿಯಪ್ಪ, ತಮ್ಮಯ್ಯ, ರಾಜೇಂದ್ರ., ಭಾಸ್ಕರ ಒಕ್ಕಲಿಗ, ಡಾ| ಎಚ್.ಎನ್. ವೆಂಕಟೇಶ ಪ್ರಸನ್ನ, ವೆಲೆಂಟೈನ್ ಡಿ’ಸೋಜಾ ಮಂಗಳೂರಿನಲ್ಲಿದ್ದಾರೆ.