Advertisement

ಮಂಗಳೂರು: ಭಾರೀ ತ್ಯಾಜ್ಯ ಉತ್ಪಾದಕರಿಗೆ ಪಾಲಿಕೆ ಮಾಸಾಂತ್ಯದ ಗಡುವು

10:19 AM Oct 12, 2019 | Team Udayavani |

ಮಂಗಳೂರು: ನಗರದಲ್ಲಿ ಭಾರೀ ತ್ಯಾಜ್ಯ ಉತ್ಪಾದನೆ ಮಾಡುವ ಕಡೆಗಳಲ್ಲಿ ಹಸಿ ತ್ಯಾಜ್ಯ ಸಂಸ್ಕರಣಾ ವ್ಯವಸ್ಥೆಯನ್ನು ಸ್ವಯಂ ಆಗಿ ಮಾಡುವಂತೆ ಮಹಾನಗರ ಪಾಲಿಕೆಯಿಂದ ಸೂಚಿಸಲಾಗಿದ್ದು, ಅಕ್ಟೋಬರ್ ಅಂತ್ಯದ ಗಡುವು ವಿಸ್ತರಿಸಲಾಗಿದೆ ಎಂದು ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹೇಳಿದರು.

Advertisement

ಈ ಕುರಿತು ಶುಕ್ರವಾರ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಪಾಲಿಕೆ ವ್ಯಾಪ್ತಿಗೊಳಪಡುವ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಕಲ್ಯಾಣ ಮಂಟಪ, ಕ್ಯಾಟರಿಂಗ್, ವ್ಯಾಪಾರಿಗಳು, ಕೋಳಿ ಮರಾಟಗಾರರು, ಅಪಾರ್ಟ್ ಮೆಂಟ್ ಅಸೋಸಿಯೇಶನ್‌ಗಳು, ಸಣ್ಣ ಕೈಗಾರಿಕೆಗಳು, ವಿದ್ಯಾರ್ಥಿ ನಿಲಯಗಳು, ಶಿಕ್ಷಣ ಸಂಸ್ಥೆಗಳು ತಮ್ಮ ಹಸಿ ತ್ಯಾಜ್ಯವನ್ನು ಖುದ್ದಾಗಿ ಸಂಸ್ಕರಣೆಗೆ ವ್ಯವಸ್ಥೆ ಮಾಡಬೇಕಾಗಿದೆ. ಇದಕ್ಕಾಗಿ ಈ ಸೂಚನೆ ನೀಡಲಾಗಿದೆ. ನವೆಂಬರ್‌ನಿಂದ ಭಾರೀ ತ್ಯಾಜ್ಯ ಉತ್ಪಾದಕರಿಂದ ಒಣ ತ್ಯಾಜ್ಯವನ್ನು ಮಾತ್ರ ಸಂಗ್ರಹಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next