Advertisement

ಮಂಗಳೂರು:ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು

02:45 PM Dec 04, 2019 | Naveen |

ಮಂಗಳೂರು: ಬಟ್ಟೆ ಒಣಗಿಸಲು ಹಾಕುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಣಾಜೆ ಸಮೀಪದ ಮಂಜನಾಡಿ ಗ್ರಾಮದ ಅಸೈ ಮದಕ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

Advertisement

ಅಸೈ ಮದಕ ನಿವಾಸಿ ನಾಗೇಶ್ ಎಂಬವರ ಪತ್ನಿ ರೋಹಿಣಿ (30) ಮೃತಪಟ್ಟವರು. ರೋಹಿಣಿ ಬಟ್ಟೆ ಒಗೆದು ಬಳಿಕ ಅದನ್ನು ಒಣಗಿಸಲು ಅಂಗಳದಲ್ಲಿ ಕಟ್ಟಿದ್ದ ಹಗ್ಗಕ್ಕೆ ಹಾಕುತ್ತಿದ್ದಾಗ ಅಂಗಳಕ್ಕೆ ಬಲ್ಬ್ ಹಾಕಲು ಎಳೆದಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ತಗುಲಿತ್ತು ಎನ್ನಲಾಗಿದೆ. ಈ ಸಂದರ್ಭ ಅವರಿಗೆ ವಿದ್ಯುತ್ ಶಾಕ್ ತಗಲಿದೆ. ಇದನ್ನು ಅರಿತ ಮನೆ ಸಮೀಪದವರು ಮೈನ್ ಸ್ವಿಚ್ ತೆಗೆದು ಅವರನ್ನು ರಕ್ಷಿಸಲು ಯತ್ನಿಸಿದರೂ ಪ್ರಯೋಜನವಾಗಿಲ್ಲ ಎಂದು ತಿಳಿದುಬಂದಿದೆ.

ಮೃತರು ಪತಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪತಿ, ಪತ್ನಿ ಇಬ್ಬರೂ ಬೀಡಿ ಕಟ್ಟಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಇತ್ತೀಚೆಗೆ ನಾಗೇಶ್ ದೇರಳಕಟ್ಟೆಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next