Advertisement

Mangaluru: ಅಪಘಾತದ ಬಳಿಕ ಕಾರು ಚಾಲಕನಿಗೆ ಲೋಹದ ಪಂಚ್‌ ನಿಂದ ಹಲ್ಲೆ, ಪೆಪ್ಪರ್‌ ಸ್ಪ್ರೇ!

08:53 PM Oct 28, 2024 | Team Udayavani |

ಮಂಗಳೂರು: ಕಾರು ಮತ್ತು ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಬಳಿಕ ಬೈಕ್‌ ಸವಾರ ಕಾರು ಚಾಲಕನಿಗೆ ಲೋಹದ ಪಂಚ್‌ ನಿಂದ ಹಲ್ಲೆಗೈದು ಮೆಣಸಿನ ಪುಡಿ ಎರಚಿದ ಘಟನೆ ನಗರದ ಕದ್ರಿ ಶಿವಭಾಗ್‌ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

Advertisement

ಬೆಳಗ್ಗೆ ಸುಮಾರು 10.30ರಿಂದ 10.45ರ ಅವಧಿಯಲ್ಲಿ ಕದ್ರಿ ಶಿವಭಾಗ್‌ನ ಪೆಟ್ರೋಲ್‌ ಬಂಕ್‌ ಬಳಿ ಓಮ್ನಿ ಕಾರು ಮತ್ತು ಬೈಕ್‌ ನಡುವೆ ಸಣ್ಣ ಮಟ್ಟಿನ ಅಪಘಾತ ಸಂಭವಿಸಿತ್ತು. ಆಗ ರೊಚ್ಚಿಗೆದ್ದ ಬೈಕ್‌ ಸವಾರ ತನ್ನ ಬಳಿ ಇದ್ದ ಲೋಹದ ಪಂಚ್‌ನಿಂದ ಓಮ್ನಿ ಕಾರು ಚಾಲಕನ ಮುಖಕ್ಕೆ ಗುದ್ದಿ, ಕಣ್ಣಿಗೆ ಪೆಪ್ಪರ್‌ ಸ್ಪ್ರೇ ಮಾಡಿ ಕ್ರೌರ್ಯ ಮೆರೆದ್ದಾನೆ ಎಂಉ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ತಕ್ಷಣ ಸ್ಥಳೀಯರು ಆತನನ್ನು ಹಿಡಿದು 112 ಪೊಲೀಸ್‌ ವಾಹನಕ್ಕೆ ಕರೆ ಮಾಡಿದ್ದರು. ಪೊಲೀಸರು ಯುವಕನನ್ನು ಕರೆದೊಯ್ದರು. ಆತನ ಬಳಿ ಆಯುಧವೂ ಇತ್ತು. ಬೇರೆ ಕೃತ್ಯ ಮಾಡಲು ಸಂಚು ನಡೆಸಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೂರು ದಾಖಲಾದ ಬಳಿಕ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next