Advertisement

Mangaluru: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆ ಅಧಿಕಾರಿ

06:16 PM Oct 21, 2023 | Team Udayavani |

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಶನಿವಾರ(ಅಕ್ಟೋಬರ್ 21) ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

Advertisement

ಮಂಗಳೂರಿನ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿ.

ನಿವೃತ್ತ ಅರಣ್ಯಾಧಿಕಾರಿ ಪರಮೇಶ್ ಎನ್. ಪಿ. ಅವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದೂರುದಾರರ ಪ್ರಕಾರ, ಭಾರತಮ್ಮ ಅವರು “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಡಬ್ಲ್ಯುಸಿಡಿ 2.0” ಗೆ ಸಂಬಂಧಿಸಿದ ಬಿಲ್‌ಗಳಿಗೆ 50 ಲಕ್ಷ ರೂ. ಬಾಕಿ ಬಿಡುಗಡೆ ಮಾಡಲು 15 % ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

1 ಲಕ್ಷ ರೂ.ಲಂಚ  ಸ್ವೀಕರಿಸುತ್ತಿದ್ದಾಗಲೇ ಭಾರತಮ್ಮ ಸಿಕ್ಕಿಬಿದ್ದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next