Advertisement

Mangaluru Airport ಕಡಬದ ಯುವಕ ತಾಯ್ನಾಡಿಗೆ ಆಗಮನ

01:15 AM Nov 21, 2023 | Team Udayavani |

ಮಂಗಳೂರು: ಮಾಡದ ತಪ್ಪಿಗೆ ಸೌದಿ ಅರೇಬಿಯಾದಲ್ಲಿ 11 ತಿಂಗಳ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿರುವ ಕಡಬದ ಚಂದ್ರಶೇಖರ್‌ ಸುರಕ್ಷಿತವಾಗಿ ಮನೆ ಸೇರಿದ್ದಾರೆ.

Advertisement

ಸೋಮವಾರ ರಾತ್ರಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ತಾಯಿ ಹೇಮಾವತಿ, ಅಣ್ಣ ಹರೀಶ್‌, ಬಿಡುಗಡೆಗೆ ಯತ್ನಿಸಿದ್ದ ಕೊಕ್ಕಡ ಶ್ರೀಧರ ಗೌಡ ಮತ್ತಿತರರು ಅವರನ್ನು ಸ್ವಾಗತಿಸಿದರು. ತಾಯಿ ಕಣ್ಣೀರ್ಗರೆದು ಮಗನನ್ನು ಆಲಂಗಿಸಿದರು.

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂ ದಿಗೆ ಮಾತನಾಡಿದ ಅವರು, ಮಾಧ್ಯಮ ಗಳಲ್ಲಿ ನನ್ನ ವಿಚಾರದ ಬಗ್ಗೆ ವರದಿ ಬಂದಿರುವ ಕಾರಣ ನನ್ನ ಬಿಡುಗಡೆ ಸುಲಭ ಗೊಂಡಿದೆ, ಮಂಗಳೂರಿನವರು ತುಂಬಾ ಜನ ನೆರವಾಗಿದ್ದಾರೆ, ಅವರೆಲ್ಲರಿಗೂ ಕೃತಜ್ಞನಾ ಗಿದ್ದೇನೆ ತಾಯ್ನಾಡಿಗೆ ಬಂದಿರುವುದು ಮತ್ತು ಅಮ್ಮನನ್ನು ನೋಡಿ ತುಂಬಾ ಖುಷಿಯಾಗಿದೆ, ಮುಂದೆ ಬೇರೆ ಉದ್ಯೋಗ ಸಿಗುವ ಭರವಸೆ ಇದೆ ಎಂದು ಹೇಳಿದರು.

ಸೌದಿಯಲ್ಲಿ ಜೈಲಿನಲ್ಲಿದ್ದಾಗ ತುಂಬಾ ಕಷ್ಟ ಆಗಿತ್ತು, ಯಾರ ಹತ್ತಿರವೂ ಸರಿಯಾಗಿ ಮಾತನಾ ಡಲು ಆಗುತ್ತಿರಲಿಲ್ಲ, ಮೊಬೈಲ್‌ ಕೊಟ್ಟರೂ ಎರಡೇ ನಿಮಿಷ ಮಾತನಾಡಬಹುದಿತ್ತು. ತಪ್ಪು ಮಾಡದೇ ನಾನು ಅಲ್ಲಿ ಸುಮ್ಮನೆ ಒಳಗಿದ್ದೆ, ಸೆರೆಮನೆ ವಾಸ ಅನುಭವಿಸಿದೆ ಎಂದರು.

ಜೈಲು ಸೇರಲು ಕಾರಣ
ಬೆಂಗಳೂರಿನಲ್ಲಿದ್ದ ಚಂದ್ರಶೇಖರ್‌ ಭಡ್ತಿಯೊಂದಿಗೆ ಸೌದಿಗೆ ತೆರಳಿದ್ದರು. ಅಲ್ಲಿ ಅವರು ಮೊಬೈಲ್‌ ಸಿಮ್‌ ಖರೀದಿಗೆಂದು ಬೆರಳಚ್ಚು ಹಾಗೂ ಇತರ ವಿವರ ನೀಡಿದ್ದರು. ಕೆಲವು ದಿನಗಳಲ್ಲಿ ರಿಯಾದ್‌ ಪೊಲೀಸರು ಚಂದ್ರಶೇಖರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಮಹಿಳೆಯೊಬ್ಬರು ನೀಡಿದ ದೂರಿನಂತೆ ಚಂದ್ರಶೇಖರ್‌ ಅವರ ಖಾತೆಗೆ ಮಹಿಳೆ ಖಾತೆಯಿಂದ 22 ಸಾವಿರ ರೂ. ವರ್ಗಾವಣೆಯಾಗಿತ್ತು. ಆದರೆ ಇದು ಕೆಲವು ದುಷ್ಕರ್ಮಿಗಳ ಸಂಚಾಗಿದ್ದು, ಚಂದ್ರ ಅವರ ನಕಲಿ ಖಾತೆಯನ್ನು ತೆರೆದು ಈ ಕೃತ್ಯ ಎಸಗಲಾಗಿತ್ತು. ಚಂದ್ರ ಅವರ ವಾದವನ್ನು ಪರಿಗಣಿಸದೆ ಪೊಲೀಸರು ಅವರನ್ನು ಜೈಲಿಗೆ ಹಾಕಿದ್ದರು.

Advertisement

ಅವರ ಗೆಳೆಯರು, ಕೆಲಸ ಮಾಡುತ್ತಿದ್ದ ಕಂಪೆನಿಯ ಪ್ರತಿನಿಧಿಗಳು ಸೇರಿ ದಂಡ ಪಾವತಿಸಿ, ಬಿಡುಗಡೆಗೆ ಶ್ರಮಿಸಿದ್ದಾರೆ. ಕೊನೆಗೂ ಚಂದ್ರಶೇಖರ್‌ ತಾಯ್ನಾಡಿಗೆ ಆಗಮಿಸುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next