Advertisement

Mangaluru ಗಾಂಜಾ ಮಾರಾಟ: ಇಬ್ಬರ ಬಂಧನ

01:00 AM Mar 19, 2024 | Team Udayavani |

ಮಂಗಳೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯ ತಿರುವೈಲ್‌ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾ.14ರಂದು ವಶಕ್ಕೆ ಪಡೆಯಲಾಗಿದೆ.

Advertisement

ದೇರಳಕಟ್ಟೆ ಬೆಳ್ಮ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್‌ ಯಾನೆ ಪೊಂಗ ಅಶ್ರಫ್‌ (30), ಅದೇ ಗ್ರಾಮದ ತಿಲಕನಗರ ನಿವಾಸಿ ಮೊಹಮ್ಮದ್‌ ಅಲ್ಫಾಜ್‌ (26) ಬಂಧಿತ ಆರೋಪಿಗಳು.

ಬಂಧಿತರಿಂದ 115 ಗ್ರಾಂ ಮೌಲ್ಯದ ಗಾಂಜಾ, ಮೊಬೈಲ್‌ ಫೋನ್‌ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 10,300 ರೂ. ಆಗಿದ್ದು, ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎನ್‌.ಡಿ.ಪಿ.ಎಸ್‌ ಕಾಯ್ದೆ ಪ್ರಕರಣ ದಾಖಲಾಗಿದೆ.

ಆರೋಪಿ ಅಶ್ರಫ್‌ ಯಾನೆ ಪೊಂಗ ಆಶ್ರಫ್‌ ಮೇಲೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ವಾರೆಂಟ್‌ ಜಾರಿಯಲ್ಲಿದ್ದು ಸುಮಾರು 6 ತಿಂಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

Advertisement

Udayavani is now on Telegram. Click here to join our channel and stay updated with the latest news.

Next