Advertisement

Mangaluru: ಬಿಲ್ಡರ್, ಮನೆಯವರ ಮೇಲೆ ಹಲ್ಲೆ… ಬರ್ಕೆ ಪೊಲೀಸರಿಂದ ಇಬ್ಬರ ಬಂಧನ

03:03 PM Oct 10, 2024 | Team Udayavani |

ಮಂಗಳೂರು: ನಗರದ ಖ್ಯಾತ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಮತ್ತು ಅವರ ಮನೆಯವರ ಮೇಲೆ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದ್ದು ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.

Advertisement

ತನುಷ್ ಶೆಟ್ಟಿ ಮತ್ತು ಅಂಕಿತ್ ಶೆಟ್ಟಿ ಬಂಧಿತ ಆರೋಪಿಗಳು.

ರಾತ್ರಿ 11:30 ಸುಮಾರಿಗೆ ವಿಮಾನ ನಿಲ್ದಾಣ ಕಡೆಯಿಂದ ಕಾರಿನಲ್ಲಿ ಬರುತ್ತಿದ್ದ ಜಿತೇಂದ್ರ ಅವರನ್ನು ಆರೋಪಿಗಳು ಹಿಂಬಾಲಿಸಿಕೊಂಡು ಬಂದು ಕೊಡಿಯಾಲಬೈಲಿನಲ್ಲಿರುವ ಮನೆಯ ಎದುರು ಹಲ್ಲೆ ನಡೆಸಿದ್ದಾರೆ. ತಡೆಯಲು ಮುಂದಾದ ಜಿತೇಂದ್ರ ಅವರ ಪತ್ನಿ ಮತ್ತು ಪುತ್ರಿಯ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಕಾರಣವೇನೆಂದು ಗೊತ್ತಾಗಿಲ್ಲ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Newborn Baby: ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ, ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Advertisement

Udayavani is now on Telegram. Click here to join our channel and stay updated with the latest news.

Next