Advertisement

Mangaluru ಕೊಲೆಯತ್ನ ಪ್ರಕರಣ: ಆರೋಪಿ ಸೆರೆ

12:30 AM Aug 30, 2023 | Team Udayavani |

ಮಂಗಳೂರು: ನೆತ್ತಿಲಪದವಿನಲ್ಲಿ ಇತ್ತೀಚೆಗೆ ನಡೆದ ಯುವಕನೊಬ್ಬನ ಕೊಲೆ ಯತ್ನ ಪ್ರಕರಣದ ಆರೋಪಿ ನಮೀರ್‌ ಹಂಝ ಆಲಿಯಾಸ್‌ ಸಮೀರ್‌ ಹಂಝ ಆಲಿಯಾಸ್‌ ದಾಸ್‌ (39) ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಆ. 12ರಂದು ಕೊಣಾಜೆ ನೆತ್ತಿಲಪದವು ನಿವಾಸಿ ಮನ್ಸೂರ್‌ಎಂಬವರಲ್ಲಿ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಮೀರ್‌ ಹಂಝ ಗಲಾಟೆ ಮಾಡಿಕೊಂಡು ಏಕಾಏಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಮೀರ್‌ ಹಂಝನು ಕೃತ್ಯ ನಡೆಸಿದ ಅನಂತರ ತಲೆಮರೆಸಿಕೊಂಡಿದ್ದ. ಆತನನ್ನು ಆ.29ರಂದು ಬಂಧಿಸಿ ಮುಂದಿನ ಕ್ರಮಕ್ಕಾಗಿ ಕೊಣಾಜೆ ಠಾಣೆಗೆ ಹಸ್ತಾಂತರಿಸಲಾಗಿದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ. ಎ. ಹೆಗಡೆ, ಪೊಲೀಸ್‌ ನಿರೀಕ್ಷಕ ಶ್ಯಾಮ್‌ ಸುಂದರ್‌ಎಚ್‌. ಎಂ., ಪಿಎಸ್‌ಐ ರಾಜೇಂದ್ರ ಬಿ. ಹಾಗೂ ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next