Advertisement

ಕೃಷ್ಣ ಮೃಗದ ಚರ್ಮ ಮಾರಾಟ ಯತ್ನ: ನಾಲ್ವರ ಬಂಧನ

04:15 PM Sep 23, 2019 | Naveen |

ಮಂಗಳೂರು: ನಗರದ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಕೃಷ್ಣ ಮೃಗದ ಚರ್ಮ ಮತ್ತು ಕೊಂಬು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ತಂಡ ಕಾರ್ಯಚರಣೆ ನಡೆಸಿ ಸೋಮವಾರ ಬಂಧಿಸಿದ್ದಾರೆ.

Advertisement

ಆರೋಪಿಗಳನ್ನು ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ರವಿ ಹನುಮಂತಪ್ಪ (32), ಮಲ್ಲಪ್ಪ (32) ಗದಗ ಜಿಲ್ಲೆ ರೋಣ ತಾಲೂಕಿನ ಟಿಪ್ಪು ಸುಲ್ತಾನ್ ಯಾನೆ ಮುನ್ನಾ(33), ಪರಶುರಾಮ ರಾ ಲಮಾಣಿ (32) ಎಂದು ಗುರುತಿಸಲಾಗಿದ್ದು, ಬಂಧಿತರಿಂದ ಕೃಷ್ಣ ಮೃಗದ 2 ಚರ್ಮ ಮತ್ತು ಒಂದು ಜೊತೆ ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಚರಣೆಯಲ್ಲಿ ಮಂಗಳೂರು ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕರಾದ ಪುರುಷೋತ್ತಮ ಎ ಹಾಗೂ ಸಿಬ್ಬಂದಿಗಳಾದ ಜಗನ್ನಾಥ ಶೆಟ್ಟಿ, ಪ್ರವೀಣ, ಉದಯ ನಾಯ್ಕ್ ಎನ್, ಮಹೇಶ, ದೇವರಾಜ್, ದೇನಿಕಾ, ಸುಂದರ ಶೆಟ್ಟಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next