Advertisement

Mangaluru; ಮತಬ್ಯಾಂಕಿಗಾಗಿ ಕಾಂಗ್ರೆಸ್ ನಿಂದ ಹೀನ ರಾಜಕಾರಣ: ನಳಿನ್ ಕುಮಾರ್ ಕಟೀಲ್ ಟೀಕೆ

11:46 AM Feb 15, 2024 | Team Udayavani |

ಮಂಗಳೂರು: ಜೆರೋಸಾ ಶಾಲೆ ವಿಚಾರದಲ್ಲಿ ಕೋಮು ಭಾವನೆಗೆ ಪ್ರಚೋದಿಸಿರುವ ಶಿಕ್ಷಕಿಯ ವಿರುದ್ಧ ಪ್ರತಿಭಟಿಸಿದ ಹೆತ್ತವರು, ಪೋಷಕರಿಗೆ ನೈತಿಕ ಬೆಂಬಲ ನೀಡಿರುವ ಶಾಸಕರು, ಕಾರ್ಪೊರೇಟರ್ ಗಳ ಮೇಲೆ ಕೇಸು ದಾಖಲಿಸಿರುವುದು, ಕಾನೂನು ಕ್ರಮ ಕೈಗೊಂಡ ಅಧಿಕಾರಿಯನ್ನು ವರ್ಗಾವಣೆ ಮಾಡಿರುವುದು ಕಾಂಗ್ರೆಸ್ ತುಷ್ಟೀಕರಣ ನೀತಿಯ ಪರಮಾವಧಿ‌ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

Advertisement

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಬ್ಯಾಂಕಿಗಾಗಿ ಇಂತಹ ಕ್ರಮ ಕೈಗೊಂಡಿರುವುದುಕಾಂಗ್ರೆಸ್ ನ ಹೀನ ರಾಜಕಾರಣ. ಇದನ್ನು ನಾವು ಖಂಡಿಸುತ್ತೇವೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿಯ ವಿರುದ್ಧ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದರು.

ಇದನ್ನೂ ಓದಿ:Electoral Bonds; ಚುನಾವಣಾ ಬಾಂಡ್‌ ಗಳ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ರಾಮ ವಿರೋಧಿ ಹೇಳಿಕೆ ನೀಡಿರುವ ಶಿಕ್ಷಕಿಯ ಮೇಲೆ ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ ಅವರು, ಜೆರೋಸಾ ಶಾಲೆ ವಿಚಾರದಲ್ಲಿ ವರ್ಗಾವಣೆ ಮಾಡಿರುವ ಡಿಡಿಪಿಐ ಅವರನ್ನು ವಾಪಸ್ ಕರೆಸಿಕೊಳ್ಳಬೇಕು‌. ಶಾಸಕರು, ಕಾರ್ಪೊರೇಟ್ ಗಳ ಮೇಲಿನ ಕೇಸ್ ವಾಪಸ್ ತೆಗೆದುಕೊಳ್ಳಬೇಕು‌‌ ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next