Advertisement

Mangaluru-Bengaluru ರೈಲು ಸಂಚಾರ ಪುನರಾರಂಭ

10:08 AM Aug 21, 2024 | Team Udayavani |

ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದ ಸಕಲೇಶಪುರ ಸಮೀಪ ರೈಲು ಮಾರ್ಗಕ್ಕೆ ಗುಡ್ಡ ಕುಸಿದ ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು ಮಂಗಳವಾರದಿಂದ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭಗೊಂಡಿದೆ.

Advertisement

ಸಕಲೇಶಪುರ ಸಮೀಪ ರೈಲು ಮಾರ್ಗಕ್ಕೆ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ನಡುವೆ ರೈಲು ಸಂಚಾರ ಸ್ಥಗಿತ ಮಾಡಿ, ರೈಲು ಮಾರ್ಗದ ಮಣ್ಣು ತೆರವು ಕಾಮಗಾರಿ ಆರಂಭಿಸಲಾಗಿತ್ತು.

ಸೋಮವಾರ ಸಂಜೆ ವೇಳೆಗೆ ಮಣ್ಣು ತೆರವು ಪೂರ್ಣಗೊಂಡು ರೈಲು ಮಾರ್ಗ ಸಂಚಾರಕ್ಕೆ ಸಿದ್ಧವಾಗಿತ್ತು. ಮಂಗಳವಾರದಿಂದ ಮಂಗಳೂರು-ಬೆಂಗಳೂರು ನಡುವೆ ರೈಲುಗಳು ನಿಗಧಿತ ಸಮಯದಂತೆ ಸಂಚಾರ ಆರಂಭಿಸಿವೆ.

ಗುಡ್ಡ ಕುಸಿತ ಪ್ರದೇಶದಲ್ಲಿ ಮಣ್ಣು ಕುಸಿತ ತಡೆಗೆ ಸುರಕ್ಷತಾ ಕೆಲಸಗಳು ಮುಂದುವರಿದಿವೆ ಎಂದು ರೈಲ್ವೇ ಮೂಲಗಳು ಮಾಹಿತಿ ನೀಡಿವೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next