Advertisement

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

01:50 AM Oct 17, 2024 | Team Udayavani |

ಮಂಗಳೂರು: ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗೆ ಹಣವಿಲ್ಲ ಎನ್ನುವ ಬಿಜೆಪಿ ಹಾಗೂ ಜೆಡಿಎಸ್‌ನವರು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಾವಿರಾರು ಕೋ.ರೂ.ಗಳ ನ್ಯಾಯಯುತ ತೆರಿಗೆಯನ್ನು ಪಡೆಯುವ ಬಗ್ಗೆ ಮಾತ್ರ ಯಾಕೆ ಮೌನ ವಹಿಸಿದೆ ಎಂದು ಕೆಪಿಸಿಸಿ ವಕ್ತಾರೆ ಯು.ಟಿ. ಫರ್ಝಾನ ಪ್ರಶ್ನಿಸಿದ್ದಾರೆ.

Advertisement

ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಿಂದ ಉತ್ತರ ಪ್ರದೇಶಕ್ಕೆ 31,962 ಕೋ.ರೂ., ಬಿಹಾರಕ್ಕೆ 17,921 ಕೋ.ರೂ, ಮಧ್ಯಪ್ರದೇಶಕ್ಕೆ 13,987 ಕೋ.ರೂ., ರಾಜಸ್ಥಾನಕ್ಕೆ 10,737 ಕೋ.ರೂ ನೀಡಿದರೂ ಕರ್ನಾಟಕಕ್ಕೆ ಕೇವಲ 6,493 ಕೋ.ರೂ. ನೀಡಲಾಗಿದೆ.

ರಾಜ್ಯ ಸರಕಾರ ಬಡವರ ಪರ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಲೇವಡಿ ಮಾಡುವ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ವೌನವಾಗಿದ್ದಾರೆ ಎಂದರು. ಮಾಜಿ ಉಪ ಮೇಯರ್‌ ಕವಿತಾ ವಾಸು, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಪ್ರ. ಕಾರ್ಯದರ್ಶಿ ವಿದ್ಯಾ, ಮಹಿಳಾ ಕಾಂಗ್ರೆಸ್‌ನ ಮಂಗಳೂರು ನಗರ ಬ್ಲಾಕ್‌ ಅಧ್ಯಕ್ಷೆ ರೂಪಾ ಚೇತನ್‌ ಪೂಜಾರಿ, ದಕ್ಷಿಣ ಬ್ಲಾಕ್‌ ಅಧ್ಯಕ್ಷೆ ಚಂದ್ರಕಲಾ ಜೋಗಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next