Advertisement

Mangaluru: ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

12:45 PM Aug 06, 2023 | Team Udayavani |

ಮಂಗಳೂರು: ನಗರದ ಬಿಲ್ಡರ್ ಒಬ್ಬರು ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರವಿವಾರ ನಡೆದಿದೆ.

Advertisement

ನಗರದ ಬಿಲ್ಡರ್ ಮೋಹನ್ ಅಮೀನ್ (66) ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರಿನ ಬೆಂದೂರುವೆಲ್ ನಲ್ಲಿರುವ ಅಟ್ಲಾಂಟಿಕ್ ಅಪಾರ್ಟ್ಮೆಂಟ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರವಿವಾರ ಬೆಳಗ್ಗೆ 9 ಗಂಟೆಯ ವೇಳೆಗೆ ಘಟನೆ ನಡೆದಿದ್ದು, 17 ಮಹಡಿಯಲ್ಲಿ ವಾಸವಿದ್ದ ಅವರು ಅಪಾರ್ಟ್‌ಮೆಂಟ್ ನ ಟೆರೆಸ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಕುಮಾರಸ್ವಾಮಿ ಕನಸು ನುಚ್ಚುನೂರಾಗಿ ಭಗ್ರಪ್ರೇಮಿಯಂತಾಗಿದ್ದಾರೆ: ದಿನೇಶ್ ಗುಂಡೂರಾವ್

ಮಂಗಳೂರಿನ ವಿವಿಧ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿದ್ದ ಮೋಹನ್ ಅಮೀನ್ ಅವರ ಆತ್ಮಹತ್ಯೆ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ.

Advertisement

ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next