Advertisement

ಮಂಗಳೂರಿನಲ್ಲಿ ಕಾರು ಅವಘಡ; ಇಬ್ಬರು ಮಕ್ಕಳು ಸೇರಿ ಏಳು ಮಂದಿಗೆ ಗಾಯ

06:24 PM Dec 11, 2022 | Team Udayavani |

ಮಂಗಳೂರು: ಕಾರೊಂದು ನಿಯಂತ್ರಣ ಕಳೆದುಕೊಂಡು ಆಟದ ಮೈದಾನಕ್ಕೆ ನುಗ್ಗಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಗಾಯಗೊಂಡ ಘಟನೆ ನಗರದ ಹೊರವಲಯದ ಬೆಂಗ್ರೆಯಲ್ಲಿ ರವಿವಾರ ನಡೆದಿದೆ.

Advertisement

ಚಾಲಕನ ನಿಯಂತ್ರಣ ತಪ್ಪಿದ ಕಾರು ಸೂಪರ್ ಸ್ಟಾರ್ ಆಟದ ಮೈದಾನಕ್ಕೆ ನುಗ್ಗಿ ಲೈಟ್ ಕಂಬಕ್ಕೆ ಢಿಕ್ಕಿಯಾಗಿ ಕಂಬ ಮುರಿದು ಬಿದ್ದಿದೆ.

ಅವಘಡದಲ್ಲಿ ಇಬ್ಬರು ಮಕ್ಕಳೂ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next