Advertisement
ಉಳ್ಳಾಲ ಮುಕ್ಕಚ್ಚೇರಿ ಕಿಲಿರಿಯ ನಗರ ನಿವಾಸಿ ಮುಹಮ್ಮದ್ ಸಮೀರ್ ಅಲಿ ಯಾನೆ ಕಡಪರ ಸಮೀರ್ (33), ಬೋಳಿಯಾರು ಕಾಪಿಕಾಡ್ ಹೌಸ್ ನಿವಾಸಿ ಮೊಹಮ್ಮದ್ ಮನ್ಸೂರ್ ಯಾನೇ ಬೋಳಿಯಾರು ಮನ್ಸೂರು (30), ಕೊಣಾಜೆ ಗ್ರಾಮ ಚಾವಡಿ ಬಳಿ ಬದ್ರಿಯಾ ನಗರ ನಿವಾಸಿ ಮೊಹಮ್ಮದ್ ನೌಷಾದ್ (30) ಬಂಧಿತರು.
ಆರೋಪಿಗಳಿಂದ 1 ತಲವಾರು, 1 ಚೂರಿ, 3 ಮೊಬೈಲ್ ಫೋನುಗಳು ಹಾಗೂ ಜೀಪ್ ಸಹಿತ 25,90,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Related Articles
Advertisement