Advertisement

Mangaluru; ಕರಾವಳಿಯಲ್ಲಿ ಭೀತಿ ಹುಟ್ಟಿಸಿದ್ದ ಚಡ್ಡಿ ಗ್ಯಾಂಗ್ ಪೊಲೀಸರ ವಶಕ್ಕೆ?

06:55 PM Jul 09, 2024 | Team Udayavani |

ಮಂಗಳೂರು: ಮಂಗಳೂರಿನ ಎರಡು ಕಡೆಗಳಲ್ಲಿ ಕಳ್ಳತನ, ದರೋಡೆ ನಡೆಸಿರುವ ಶಂಕಿತ ಚಡ್ಡಿ ಗ್ಯಾಂಗನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಮಂಗಳೂರಿನ ಕೋಟೆಕಣಿಯಲ್ಲಿ ಮನೆಯವರಿಗೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿ ಅದೇ ಮನೆಯ ಕಾರಿನಲ್ಲಿ ಮೂಲ್ಕಿಯವರೆಗೆ ಹೋಗಿದ್ದ ದರೋಡೆಕೋರರು ಅಲ್ಲಿಂದ ಮಂಗಳೂರಿಗೆ ಬಸ್ ನಲ್ಲಿ ಬಂದು ಬಳಿಕ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಸಕಲೇಶಪುರದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಗ್ಯಾಂಗ್ ಚಡ್ಡಿ ಮತ್ತು ಬನಿಯಾನ್ ಧರಿಸಿ ಕಳ್ಳತನ, ದರೋಡೆ ನಡೆಸುವ ತಂಡವಾಗಿದ್ದು ರಾಜಸ್ತಾನ, ಮಧ್ಯಪ್ರದೇಶ ಮೊದಲಾದ ರಾಜ್ಯಗಳಿಗೆ ಸೇರಿದವರು ಇದರಲ್ಲಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next