Advertisement

Mangaluru; ವಿದ್ಯಾರ್ಥಿನಿಗೆ ಎದೆನೋವು: ಪ್ರಯಾಣಿಕರಿದ್ದ ಬಸ್ ನೇರ ಆಸ್ಪತ್ರೆಗೆ!

01:01 PM Jul 31, 2024 | Team Udayavani |

ಮಂಗಳೂರು: ನಗರದ ಸಿಟಿ ಬಸ್ ನಲ್ಲಿ ಮಂಗಳವಾರ ಪ್ರಯಾಣಿಸುತ್ತಿದ್ದ ಕಾಲೇಜಿನ‌ ವಿದ್ಯಾರ್ಥಿನಿಯೊಬ್ಬಳಿಗೆ ಏಕಾಏಕಿ ತೀವ್ರ ಎದೆ ನೋವಾಗಿ‌ ಹೃದಯಾಘಾತದ ಮುನ್ಸೂಚನೆ ಸಿಗುತ್ತಿದ್ದಂತೆ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದು ಅವರಿಗೆ ನೆರವಾಗುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Advertisement

13‌ಎಫ್‌ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಎದೆ‌ನೋವು ಕಾಣಿಸಿಕೊಂಡಿತ್ತು. ಬಸ್ ಚಾಲಕ, ನಿರ್ವಾಹಕರಾದ ಗಜೇಂದ್ರ ಕುಂದರ್, ಮಹೇಶ್ ಪೂಜಾರಿ ಮತ್ತು ಸುರೇಶ್ ಅವರು ಕೂಡಲೇ ಎಚ್ಚೆತ್ತು ಎಲ್ಲಾ ಪ್ರಯಾಣಿಕರ ಸಮೇತ ಆಂಬುಲೆನ್ಸ್ ಮಾದರಿಯಲ್ಲಿ ಕಂಕನಾಡಿ ಆಸ್ಪತ್ರೆಗೆ ಕೊಂಡೊಯ್ದರು. ತತ್ ಕ್ಷಣ ವಿದ್ಯಾರ್ಥಿನಿಯನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಯಿತು.

ಚಾಲಕ, ನಿರ್ವಾಹಕರ ಮಾನವೀಯ ಕಾಳಜಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next