Advertisement

Mangaluru;ತಿರುವೈಲ್‍ ಕಂಬಳದಲ್ಲಿ ಸಿಎಂ ಭಾಗಿ: ಡ್ರೋನ್ ಹಾರಾಟ ನಿಷೇಧ

06:21 PM Feb 16, 2024 | Team Udayavani |

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ17 ರಂದು ಮಂಗಳೂರು ಅಡ್ಯಾರಿನಲ್ಲಿ ನಡೆಯುವ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಲಿದ್ದಾರೆ.

Advertisement

ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆ 17ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯನ್ನು ಹಾಗೂ ವಾಮಂಜೂರಿನ ತಿರುವೈಲಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯನ್ನು ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಆ ಪ್ರದೇಶದಲ್ಲಿ ಯಾವುದೇ ಮಾದರಿಯ ಡ್ರೋನ್ ಹಾರಾಟ ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಈ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next