Advertisement

Mangaluru; ಮೆಸೇಜ್‌ ವೈರಲ್‌ ವಿರುದ್ಧ ದೂರು

11:37 AM Feb 15, 2024 | Team Udayavani |

ಮಂಗಳೂರು: ಖಾಸಗಿ ಶಾಲೆಯಲ್ಲಿ ಧರ್ಮ ವಿಚಾರಕ್ಕೆ ಭುಗಿಲೆದ್ದ ಗಲಾಟೆ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹರಡಿಸುತ್ತಿರುವ ಬಗ್ಗೆ ಸೆನ್‌ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

Advertisement

ಪಾಲಿಕೆಯ ಮಾಜಿ ಸದಸ್ಯೆ ಎಸ್‌. ಅಪ್ಪಿ ಈ ಬಗ್ಗೆ ಬುಧವಾರ ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿಗಳು ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸುದ್ದಿ, ವಾಯ್ಸ ಮೆಸೇಜ್‌ಗಳನ್ನು ಕಳಿಸುತ್ತಿದ್ದಾರೆ.

ಇದರಿಂದ ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿದ್ದು. ಇದರ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next