Advertisement

Mangaluru; ಕೇಂದ್ರ ಸರ್ಕಾರ, ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಬೃಹತ್ ಪಾದಯಾತ್ರೆ

11:19 AM Aug 19, 2024 | Team Udayavani |

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್‌ ನಿಂದ ಸೋಮವಾರ (ಆ.19) ಮಂಗಳೂರಿನ ಲೇಡಿಹಿಲ್ ನಿಂದ ಲಾಲ್ ಭಾಗ್ ವರೆಗೆ ಪಾದಯಾತ್ರೆ ನಡೆಯಿತು.

Advertisement

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಪ್ರಕಾಶ್ ರಾಥೋಡ್, ರಮಾನಾಥ ರೈ ಮೊದಲಾದವರು ಭಾಗಿಯಾಗಿದ್ದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಕೇಂದ್ರ ಸರಕಾರದ ವಿರುದ್ದ, ರಾಜ್ಯಪಾಲರಿಗೆ ಧಿಕ್ಕಾರ ಘೋಷಣೆ ಕೂಗಲಾಯಿತು. ಲಾಲ್ ಭಾಗ್ ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆ ನಡೆಸಲಾಗಿದೆ. ನೂರಾರು ಮಂದಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next