Advertisement

Mangaluru ಕ್ರಿಕೆಟ್‌ ಬೆಟ್ಟಿಂಗ್‌: ಓರ್ವನ ಬಂಧನ

12:24 AM Oct 21, 2023 | Team Udayavani |

ಮಂಗಳೂರು: ಶುಕ್ರವಾರದಂದು ಆಸ್ಟ್ರೇಲಿಯ ಮತ್ತು ಪಾಕಿಸ್ಥಾನ ನಡುವಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಕ್ಕೆ ಸಂಬಂಧಿಸಿದಂತೆ ಬಂಟ್ಸ್‌ ಹಾಸ್ಟೆಲ್‌ ಬಳಿ ಸಾರ್ವಜನಿಕರಿಂದ ಬೆಟ್ಟಿಂಗ್‌ ಹಣ ಪಡೆಯುತ್ತಿದ್ದ ಕಿರಣ್‌ ಬಾಬು (42) ನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

Advertisement

ಆರೋಪಿಯಿಂದ ಒಂದು ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರ ಮಾರ್ಗದರ್ಶನದಲ್ಲಿ ಪೂರ್ವ ಪೊಲೀಸ್‌ ಠಾಣೆಯ ಪಿಎಸ್‌ಐ ಯೋಗೀಶ್ವರನ್‌ ಮತ್ತು ಸಿಬಂದಿಯವರಾದ ರಮೇಶ್‌ ಮತ್ತು ಸುರೇಶ್‌ ಕಾರ್ಯಾಚರಣೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next