Advertisement

ಮಂಗಳೂರು: ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ…ಓರ್ವನ ಸೆರೆ

10:55 PM Mar 04, 2023 | Team Udayavani |

ಮಂಗಳೂರು: ಬರ್ಕೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಡಿಯಾಲಗುತ್ತು ಪರಿಸರದ ಮನೆಯೊಂದರಲ್ಲಿ ಕಳೆದ ಬುಧವಾರ ತನ್ನ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

Advertisement

ಕೇಶವ ಬಂಧಿತ ಆರೋಪಿ. ಈತನನ್ನು ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಬಂಧಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಹಿಳೆಯ ಮನೆಯಲ್ಲಿ ಪೊಲೀಸರಿಗೆ ಡೆತ್‌ನೋಟ್‌ ದೊರೆತಿದ್ದು ಅದರ ಆಧಾರದಲ್ಲಿ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ವಿಜಯಾ (33) ಅವರು ತನ್ನ ನಾಲ್ಕು ವರ್ಷದ ಪುತ್ರಿ ಶೋಭಿಕಾ ಹಾಗೂ ಇನ್ನೋರ್ವಳು 12 ವರ್ಷದ ಪುತ್ರಿಯೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. 12 ವರ್ಷದ ಪುತ್ರಿ ಪಾರಾಗಿದ್ದಳು. ವಿಜಯಾ ಮತ್ತು ಶೋಭಿಕಾ ಮೃತಪಟ್ಟಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next