Advertisement

Mangaluru: ಇಂದಿರಾ ಕ್ಯಾಂಟೀನ್‌ ಬಳಿ ಬಸ್‌ ನಿರ್ವಾಹಕನ ಶವ ಪತ್ತೆ; ಕೊಲೆ ಶಂಕೆ

11:27 PM Oct 15, 2024 | Team Udayavani |

ಮಂಗಳೂರು: ನಗರದ ಸ್ಟೇಟ್‌ ಬ್ಯಾಂಕ್‌ನ ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಖಾಸಗಿ ಬಸ್‌ ನಿರ್ವಾಹಕರೊಬ್ಬರ ಶವ ಸೋಮವಾರ ಪತ್ತೆಯಾಗಿದೆ.

Advertisement

ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್‌ (30) ಮೃತರು. ಅವರನ್ನು ಕೊಲೆ ಮಾಡಿರುವ ಶಂಕೆ ಮೂಡಿದೆ. ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್‌ ರಾಜೇಶ ಅವರ ಜರ್ಜರಿತವಾದ ಮೃತದೇಹ ಪತ್ತೆಯಾಗಿದೆ.

ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ರಾಜೇಶ್‌ ಅವರು ಪ್ರತೀ ವರ್ಷವೂ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಮಾಲೆ ಧರಿಸಿ ಹೋಗುತ್ತಿದ್ದು, ಸರಳ ಸ್ವಭಾವದವನಾಗಿದ್ದು ಎಲ್ಲರೊಂದಿಗೂ ಆತ್ಮೀಯವಾಗಿ ಬೆರೆಯುತ್ತಿದ್ದರೆಂದು ಸಹೋದ್ಯೋಗಿ ಮಿತ್ರರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next