Advertisement

Mangaluru ಡೆಂಗ್ಯೂ: 2 ತಿಂಗಳಲ್ಲಿ 40 ಪ್ರಕರಣ

01:06 AM Sep 14, 2023 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಡೆಂಗ್ಯೂ ಹರಡುವ ಸಾಧ್ಯತೆ ಇರುತ್ತದೆ. ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಲ್ಲಿ 40 ಮಂದಿಗೆ ಡೆಂಗ್ಯೂ ಪ್ರರಕಣ ದೃಢಪಟ್ಟಿದೆ ಎಂದು ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ನವೀನ್‌ಚಂದ್ರ ಕುಲಾಲ್‌ ಹೇಳಿದರು.

Advertisement

ನಗರದಲ್ಲಿ ಮಾತನಾಡಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಗ್ಯೂ ಪ್ರಕರಣ ಕಡಿಮೆ ಇದೆ. ಆದರೆ ಸದ್ಯ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು ಮತ್ತೆ ಡೆಂಗ್ಯೂ ಏರಿಕೆಯ ಭೀತಿ ಇದೆ. ಜಿಲ್ಲೆಯಲ್ಲಿ ಸದ್ಯ 198 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ಕಳೆದ ಎರಡು ತಿಂಗಳಲ್ಲಿ 40 ಮಂದಿಯಲ್ಲಿ ಡೆಂಗ್ಯೂ ಪ್ರಕರಣ ಕಂಡುಬಂದಿದೆ.

ಡೆಂಗ್ಯೂ ನಿಯಂತ್ರಣದ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರವೂ ಅಗತ್ಯ. ಲಾರ್ವ ನಾಶ ಸೇರಿದಂತೆ, ಮನೆಯಲ್ಲಿ ನೀರು ನಿಲ್ಲುವುದನ್ನು ತಡೆಗಟ್ಟಬೇಕು ಎಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next