Advertisement

Mangaluru; ಕೆತ್ತಿಕಲ್ ಭೂಮಾಫಿಯಾ ಆರೋಪ ಉನ್ನತ ತನಿಖೆಗೆ ದಿನೇಶ್ ಗುಂಡೂರಾವ್ ಆದೇಶ

12:03 PM Aug 02, 2024 | Team Udayavani |

ಮಂಗಳೂರು: ಇಲ್ಲಿನ ಕೆತ್ತಿಕಲ್ ಭೂ ಮಾಫಿಯಾ ಆರೋಪದ ಬಗ್ಗೆ ಉನ್ನತ ತನಿಖೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆದೇಶಿಸಿದ್ದಾರೆ.

Advertisement

ಮಂಗಳೂರಿನ ಕೆತ್ತಿಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಆತಂಕವಿರುವ ಸ್ಥಳಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ (ಆ.2) ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇಲ್ಲಿ ಭೂಮಾಫಿಯಾದ ವಾಸನೆ ಇದೆ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Advertisement

ಕೆತ್ತಿಕಲ್ ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಗಣಿಗಾರಿಕೆ ಮಾಡಲಾಗಿದೆ. ದೊಡ್ಡ ಪ್ರಮಾಣದ ಲೋಪವಾಗಿರುವುದು ಕಂಡು ಬಂದಿದೆ. ಫೆಬ್ರವರಿ ತಿಂಗಳಲ್ಲೇ ಜಿಲ್ಲಾಡಳಿತ ಪಾಲಿಕೆ ಮುನ್ಸೂಚನೆ ನೀಡಿತ್ತು. ಪಾಲಿಕೆ ಯಾವ ಕ್ರಮ ಕೈಗೊಂಡಿದೆ ಎಂದು ಪರಿಶೀಲನೆ ನಡೆಸುತ್ತೇವೆ. ಗಣಿ ಭೂ ವಿಜ್ಞಾನ ಇಲಾಖೆ ಮಣ್ಣು ಅಗೆಯಲು ಅವಕಾಶ ಯಾಕೆ ನೀಡಿದೆ ಎಂದು ವರದಿ ಕೇಳುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next