Advertisement

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಂಜಿನಿಯರ್ ಗೆ 4 ವರ್ಷ ಜೈಲು ಶಿಕ್ಷೆ

08:19 PM Mar 16, 2023 | Team Udayavani |

ಮಂಗಳೂರು : ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಂಜಿನಿಯರ್ ಗೆ 4 ವರ್ಷ ಜೈಲು ಶಿಕ್ಷೆ ಮತ್ತು 26 ಲಕ್ಷದ 50 ಸಾವಿರ ರೂ. ದಂಡ ಕಟ್ಟಲು ಆದೇಶಿಸಿ ಗುರುವಾರ ನಗರದ ಮೂರನೇ ಹೆಚ್ಚುವರಿ ಸತ್ರ ನ್ಯಾಯಾಲಯ ಆದೇಶ ನೀಡಿದೆ.

Advertisement

ಮುಲ್ಕಿ ನಗರ ಪಂಚಾಯತ್ ಜೂನಿಯರ್ ಇಂಜಿನಿಯರ್ ಪದ್ಮನಾಭ ಎನ್ .ಕೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಸಂಪಾದಿಸಿದ್ದು ದಾಳಿ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳು ಜೈಲು ಶಿಕ್ಷೆ ವಿಧಿಸಲು ನ್ಯಾಯಾಧೀಶ ಬಿ.ಬಿ.ಜಕಾತಿ ಅಂತಿಮ ತೀರ್ಪು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next