Advertisement

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

01:41 AM Oct 20, 2024 | Team Udayavani |

ಮಂಗಳೂರು: ಕೈಗಾರಿಕೆಗಳು, ಉದ್ದಿಮೆಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಕ್ಲಿನಿಕ್‌ಗಳು, ಸಾ ಮಿಲ್‌ಗ‌ಳು, ವಾಣಿಜ್ಯ ಸಂಕಿರ್ಣಗಳು, ವಸತಿ ಸಮುಚ್ಚಯಗಳು (ಅಪಾರ್ಟ್‌ಮೆಂಟ್‌ಗಳು), ಸಮುದಾಯ ಭವನಗಳು, ಕಲ್ಯಾಣ ಮಂಟಪಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಪಡೆಯುವುದು ಕಡ್ಡಾಯವಾಗಿದೆ.

Advertisement

ಈ ಹಿನ್ನೆಲೆಯಲ್ಲಿ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಪಡೆದು ನವೀಕರಣಗೊಳಿಸದೆ ಹಾಗೂ ಪಡೆಯದೆ ಕಾರ್ಯನಿರ್ವಹಿಸುತ್ತಿರುವವರಿಗೆ ಮಂಡಳಿಯಿಂದ ಸ್ಥಾಪನಾ ಸಮ್ಮತಿ ಪತ್ರ ಪಡೆದು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಮಂಡಳಿಯು ಅನ್ವಯವಾಗುವ ಕಾನೂನಿನ ಪ್ರಕಾರ ಕ್ರಮ ಜರಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕಚೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೈಕಂಪಾಡಿ ಕೈಗಾರಿಕೆ ಪ್ರದೇಶ, ಮಂಗಳೂರು ಇಲ್ಲಿ ಸಂಪರ್ಕಿಸಲು ಮಂಗಳೂರು ಪ್ರಾದೇಶಿಕ ಕಚೇರಿಯ ಪರಿಸರ ಅಧಿ ಕಾರಿಯ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next