Advertisement

ಮೀನುಗಾರರ ಮೇಲೆ ಆಕ್ರಮಣ: ಮನವಿ

12:27 AM Feb 15, 2023 | Team Udayavani |

ಮಂಗಳೂರು: ಕನ್ಯಾಕುಮಾರಿ ಬಳಿ ಆಳಸಮುದ್ರದಲ್ಲಿ ರಾಜ್ಯದ ಮೀನುಗಾರರ ಮೇಲೆ ಆಕ್ರಮಣ ನಡೆಸಿದ ತಮಿಳುನಾಡು ಮೀನುಗಾರರ ಮೇಲೆ ಕ್ರಮ ಕೈಗೊಳ್ಳುವಂತೆ ಹಾಗೂ ರಾಜ್ಯದ ಮೀನುಗಾರರಿಗೆ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಮಂಗಳೂರು ಟ್ರಾಲ್‌ಬೋಟ್‌ ಮೀನುಗಾರರ ಸಂಘದ ನೇತೃತ್ವದಲ್ಲಿ ಮಂಗಳವಾರ ಮಂಗಳೂರು ಪೊಲೀಸ್‌ ಆಯುಕ್ತರು, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಕರಾವಳಿ ಕಾವಲು ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.

Advertisement

ಫೆ. 8ರಂದು ಮೀನುಗಾರಿಕೆಯಲ್ಲಿ ತೊಡಗಿದ್ದ ಬೋಟುಗಳನ್ನು ಸುತ್ತುವರಿದು ಜಖಂಗೊಳಿಸಿ ಮೀನುಗಾರರಿಗೆ ಹಲ್ಲೆ ನಡೆಸಲಾಗಿದೆ. ಅಲ್ಲದೆ ಮೀನನ್ನು ದೋಚಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು, ನಷ್ಟವನ್ನು ವಸೂಲಿ ಮಾಡಿಸಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮೀನುಗಾರರ ಮೇಲೆ ನಡೆದಿರುವ ಆಕ್ರಮಣದ ಬಗ್ಗೆ ಮೀನುಗಾರಿಕಾ ಇಲಾಖೆಯ ನಿರ್ದೇಶಕರಿಗೂ ದೂರು ನೀಡಲಾಗುವುದು. ಸರಕಾರ ಈ ಬಗ್ಗೆ ಕೂಡಲೇ ಸ್ಪಂದಿಸಬೇಕು ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next