Advertisement

Mangaluru; ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌: ಅರ್ಜಿ ಆಹ್ವಾನ

11:40 PM Sep 08, 2023 | Team Udayavani |

ಮಂಗಳೂರು: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿ ನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ದ್ವಿತೀಯ ಪಿಯುಸಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗ್ಳನ್ನು ನೀಡಲಾಗುತ್ತಿದೆ.

Advertisement

ಎಸೆಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದಿರುವ (ಮೆರಿಟ್‌ ಆಧಾರದ ಮೇಲೆ) ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು ಹಾಗೂ ಸಮನಾದ ಅಂಕಗಳನ್ನು ಪಡೆದಾಗ ಫಲಾನುಭವಿಯ ನೋಂದಣಿ ಸದಸ್ಯತ್ವದ ಹಿರಿತನವನ್ನು ಆಯ್ಕೆಗೆ ಪರಿಗಣಿಸಲಾಗುವುದು.

ಅರ್ಜಿ ಸಲ್ಲಿಸಲು ಸೆ. 22 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೆೇರಿ, ದ.ಕ. ಉಪ ವಿಭಾಗ-1 ಹಾಗೂ 2, ಮಂಗಳೂರು, 2 ಮತ್ತು 3ನೇ ಮಹಡಿ, ಕಾರ್ಮಿಕ ಭವನ, ಯೆಯ್ನಾಡಿ, ಅಥವಾ ಸಂಬಂಧಪಟ್ಟ ಹಿರಿಯ/ಕಾರ್ಮಿಕ ನಿರೀಕ್ಷಕರ ಕಚೆೇರಿಯನ್ನು ಸಂಪರ್ಕಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next