Advertisement

Mangaluru ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿರ್ವಾಹಕನಿಗೆ ಶಿಕ್ಷೆ

12:22 AM Feb 24, 2024 | Team Udayavani |

ಮಂಗಳೂರು: ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ದೌರ್ಜ ನ್ಯವೆಸಗಿದ ಕೆಎಸ್ಸಾ ರ್ಟಿಸಿ ಬಸ್‌ ನಿರ್ವಾಹಕನಿಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

Advertisement

ಬಾಗಲಕೋಟೆಯ ದಾವಲ್‌ ಸಾಬ್‌ (34) ಶಿಕ್ಷೆಗೊಳಗಾದವನು. ಘಟನೆ 2023ರ ಮಾರ್ಚ್‌ನಲ್ಲಿ ನಡೆದಿತ್ತು.

ಪ್ರಕರಣದ ವಿವರ
ಬಾಲಕಿ ಶಾಲೆಯಿಂದ ಬಿ.ಸಿ. ರೋಡ್‌ನ‌ಲ್ಲಿನ‌ ತನ್ನ ಮನೆಗೆ ಬರಲು ಕಲ್ಲಡ್ಕದಲ್ಲಿ ಬಸ್‌ ಹತ್ತಿದ್ದಳು. ಬಸ್‌ನಲ್ಲಿ ನಾಲ್ಕೈದು ಪ್ರಯಾಣಿಕರಷ್ಟೇ ಇದ್ದರು. ಮುಂದಿನ ನಿಲ್ದಾಣದಲ್ಲಿ ಅವರೂ ಇಳಿದರು. ಆಗ ನಿರ್ವಾಹಕ ಬಾಲಕಿ ಬಳಿ ಬಂದು ಅಶ್ಲೀಲವಾಗಿ ವರ್ತಿಸಿದ್ದ. ಹೆತ್ತವರು, ಪೊಲೀಸರಿಗೆ ತಿಳಿಸುವುದಾಗಿ ಬಾಲಕಿ ಹೇಳಿದರೂ ಆರೋಪಿ ನೀಡಿದ್ದ. ಅಸಭ್ಯ ವರ್ತನೆ ಮುಂದುವರಿಸಿದ್ದ. ಇದರಿಂದ ತೀವ್ರವಾಗಿ ನೊಂದಿದ್ದ ಬಾಲಕಿ ಬಸ್‌ನ ಸಂಖ್ಯೆಯ ಸಮೇತ ಮನೆ ಯಲ್ಲಿ ತಾಯಿ ಬಳಿ ಎಲ್ಲವನ್ನೂ ವಿವರಿಸಿದ್ದಳು. ಬಳಿಕ ತಾಯಿ ಮತ್ತು ಬಾಲಕಿ ಬಂಟ್ವಾಳ ನಗರ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ ಮಂಗಳೂರಿಗೆ ವಾಪಸು ಹೊರಟಿದ್ದ ಬಸ್‌ನಲ್ಲಿನ ನಿರ್ವಾಹಕನನ್ನು ವಶಕ್ಕೆ ಪಡೆದಿದ್ದರು.

ಇನ್‌ಸ್ಪೆಕ್ಟರ್‌ ನಂದಿನಿ ಎಸ್‌. ಶೆಟ್ಟಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಎಫ್ಟಿಎಸ್‌ಸಿ-1 ಪೋಕ್ಸೋ )ದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಶುಕ್ರವಾರ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಒಂದು ವರ್ಷ ಸಾದಾ ಸಜೆ ಮತ್ತು 5,000 ರೂ. ದಂಡ, ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಒಂದು ತಿಂಗಳು ಸಾದಾ ಸಜೆ, ಪೋಕ್ಸೋ ಕಾಯಿದೆಯಡಿ 2 ವರ್ಷ ಕಠಿನ ಸಜೆ ಮತ್ತು 10,000 ರೂ. ದಂಡ, ದಂಡ ಪಾವತಿಸದಿದ್ದರೆ ಮತ್ತೆ 2 ತಿಂಗಳು ಸಾದಾ ಸಜೆ ವಿಧಿಸಿದ್ದಾರೆ. ಸಂತ್ರಸ್ತೆ ವಿದ್ಯಾರ್ಥಿನಿಗೆ 10,000 ರೂ.ಗಳನ್ನು ಪರಿಹಾರವಾಗಿ ನೀಡು ವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಪ್ರಾಸಿ ಕ್ಯೂಷನ್‌ ಪರವಾಗಿ ಪೋಕ್ಸೋ ವಿಶೇ ಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ವಾದಿಸಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next