Advertisement

Mangaluru: ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಆಗ್ರಹಿಸಿ ಮಾನವ ಸರಪಳಿ

10:24 PM Aug 12, 2024 | Team Udayavani |

ಮಂಗಳೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಅವರ ಸುರಕ್ಷೆಗೆ ಕ್ರಮ ಕೈಗೊಳ್ಳಲು ಆಗ್ರಹಿಸಿ, ಜನಜಾಗೃತಿಗಾಗಿ ಹಿಂದೂ ಹಿತರಕ್ಷಣ ಸಮಿತಿ ಮಂಗಳೂರು ನೇತೃತ್ವ ದಲ್ಲಿ ನಗರದ ಮಿನಿ ವಿಧಾನಸೌಧ ಮುಂಭಾಗ ಸೋಮವಾರ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.

Advertisement

ಈ ವೇಳೆ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರ ಸತೀಶ್‌ ಪ್ರಭು ಅವರು, ಬಾಂಗ್ಲಾದಲ್ಲಿ ಪ್ರಜಾಪ್ರಭುತ್ವದ ರಕ್ಷಣೆಯ ಹೆಸರಿನಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ. ಹಿಂದೂಗಳ ಮನೆ, ದೇವಾಲಯ, ವಾಣಿಜ್ಯ ಸಂಸ್ಥೆಗಳ ಮೇಲೆ ಅವ್ಯಾಹತವಾಗಿ ದಾಳಿ ನಡೆಸಲಾಗುತ್ತಿದೆ. ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ ಕ್ರೌರ್ಯ ಮೆರೆಯಲಾಗುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಬಾಂಗ್ಲಾದೇಶದಲ್ಲಿರುವ ಹಿಂದೂ ಗಳಿಗೆ ಮಾನವ ಹಕ್ಕುಗಳ ರಕ್ಷಣೆ ಇಲ್ಲವೇ? ವಿಶ್ವದ ಮಾನವ ಹಕ್ಕುಗಳ ಆಯೋಗ, ಸಂಘಟನೆಗಳು ಈ ಬಗ್ಗೆ ಯಾಕೆ ಸುಮ್ಮನಿವೆ ಎಂದು ಪ್ರಶ್ನಿಸಿದ ಅವರು, ಬಾಂಗ್ಲಾ ಹಿಂದೂಗಳ ಜತೆ ನಾವಿದ್ದೇವೆ ಎಂದು ಧೈರ್ಯ ತುಂಬಲಾಯಿತು.

ಸಂಸದ ಕ್ಯಾ| ಬ್ರಿಜೇಶ್‌ ಚೌಟ, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ವೈ. ಭರತ್‌ ಶೆಟ್ಟಿ, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಉಪಮೇಯರ್‌ ಸುನೀತಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್‌ ಆರ್ವಾರ್‌, ಕಾರ್ಯದರ್ಶಿ ಪೂರ್ಣಿಮಾ, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಮೇಯರ್‌ಗಳಾದ ದಿವಾಕರ ಪಾಂಡೇಶ್ವರ, ಕವಿತಾ ಸನಿಲ್‌, ವಿವಿಧ ಸಂಘಟನೆಗಳ ಪ್ರಮುಖರಾದ ನಿತಿನ್‌ ಕುಮಾರ್‌, ಶಿವಾನಂದ ಮೆಂಡನ್‌, ಜಗದೀಶ ಶೇಣವ, ಭುಜಂಗ ಕುಲಾಲ್‌, ಗಿರಿಪ್ರಕಾಶ್‌ ತಂತ್ರಿ, ಹನುಮಂತ ಕಾಮತ್‌, ರಮೇಶ್‌ ಕಂಡೆಟ್ಟು, ಮಂಜುಳಾ ರಾವ್‌, ನಂದನ್‌ ಮಲ್ಯ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next