Advertisement

ಮಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಚೂರಿ ಇರಿದು ಸಿಬಂದಿಯ ಬರ್ಬರ ಹತ್ಯೆ

07:39 PM Feb 03, 2023 | Team Udayavani |

ಮಂಗಳೂರು : ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿಯನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ರಾಘವ (50) ಅತ್ತಾವರ ನಿವಾಸಿ ಎಂದು ತಿಳಿದು ಬಂದಿದೆ.

Advertisement

ಸಿಸಿ ಕ್ಯಾಮೆರಾದಲ್ಲಿ ಕೃತ್ಯ ದಾಖಲಾಗಿರುವ ಸಾಧ್ಯತೆಯಿದ್ದು, ಪರಿಶೀಲನೆ ನಡೆಯುತ್ತಿದೆ. ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಜ್ಯುವೆಲ್ಲರಿಯಿಂದ ಓರ್ವ ಹೆಲ್ಮೆಟ್ ಮತ್ತು ಮಾಸ್ಕ್ ಧರಿಸಿದ್ದ ವ್ಯಕ್ತಿ ಹೊರಗೆ ಬರುವುದು ಕಂಡು ಬಂದಿದೆ.

ಘಟನೆ ವೇಳೆ ಅಂಗಡಿಯಲ್ಲಿ ಒಬ್ಬರೇ ಇದ್ದರೆಂದು ತಿಳಿದುಬಂದಿದೆ. ದರೋಡೆಯೆ ಬೇರೆ ಕಾರಣವೇ ತಿಳಿದು ಬಂದಿಲ್ಲ.‌ಅಂಗಡಿ ಮಾಲಕರು ಊಟ ಮಾಡಿ ಬಂದಾಗ ಘಟನೆ ಗಮನಕ್ಕೆ ಬಂದಿದ್ದು, ಘಟನೆ ನಡೆದ ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಜ್ಯುವೆಲ್ಲರಿ ಶಾಪ್ ಮಾಲಕ ಕೇಶವ ಆಚಾರ್ಯ ಅವರು ಪೊಲೀಸರ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದು, ಮಧ್ಯಾಹ್ನ 3.40 ರ ವೇಳೆಗೆ ನಾನು ಊಟ ಮುಗಿಸಿ ಬರುವಾಗ ನನ್ನ ಕಾರು ಇಡುವ ಜಾಗದಲ್ಲಿ ಬೈಕ್ ಒಂದು ನಿಲ್ಲಿಸಲಾಗಿತ್ತು. ಅದನ್ನು ತೇಗಿಸುವ ಸಲುವಾಗಿ ರಾಘವ ಅವರಿಗೆ ಕರೆ ಮಾಡಿದ್ದೆ. ಆಗ ಅವರು ಚೂರಿ ಹಾಕುತ್ತಿದ್ದಾರೆ.. ಎಂದು ಹೇಳಿದ್ದು , ನನ್ನ ಎದುರೇ ಆರೋಪಿ ಪರಾರಿಯಾಗಿದ್ದಾನೆ ಎಂದಿದ್ದಾರೆ.

ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ , ಡಿಸಿಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕರ್ಮಿ ಕುತ್ತಿಗೆಗೆ ಇರಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next